ADVERTISEMENT

ಕುಡಿಯುವ ನೀರು ಪೂರೈಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2011, 19:30 IST
Last Updated 26 ಸೆಪ್ಟೆಂಬರ್ 2011, 19:30 IST

ಮಾಗಡಿ: ತಾಲ್ಲೂಕಿನಲ್ಲಿ ಕಳೆದ 12 ದಿನಗಳಿಂದಲೂ ಸಹ  ಅನಿಯಮಿತ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ವಿದ್ಯುತ್ ಇಲ್ಲದೆ ಕುಡಿಯುವ ನೀರಿಗೆ ಜನತೆ ಪರದಾಡುತ್ತಿದ್ದೇವೆ ಎಂದು ಬಿಳಗುಂಬ ಗ್ರಾಮಸ್ಥರು ತಿಳಿಸಿದ್ದಾರೆ. 

 ವಿದ್ಯುತ್ ಸಮಸ್ಯೆಯ ಬಗ್ಗೆ ಜನತೆ ಕೇಳಿದರೆ ಗ್ರಾಮ ಪಂಚಾಯಿತಿ ಹಾಗೂ ಬೆಸ್ಕಾಂ ಅಧಿಕಾರಿಗಳನ್ನು ಸ್ಪಂದಿಸುತ್ತಿಲ್ಲ ಎಂದು ಗ್ರಾಮದ ಜನತೆ ದೂರಿದ್ದಾರೆ.

ರಾತ್ರಿಯ ವೇಳೆ ಅರ್ಧ ಗಂಟೆಗೊಮ್ಮೆ ವಿದ್ಯುತ್ ಕಣ್ಣಾಮುಚ್ಚಾಲೆ ಹೇಳ ತೀರದು. ಸರ್ಕಾರ ಈ ಸಮಸ್ಯೆ ಬಗೆಹರಿಸಿ ಕುಡಿಯುವ ನೀರಿಗೆ ಅನುಕೂಲ ಮಾಡಿಕೊಡುವಂತೆ ಬಿಳಗುಂಬ ಮತ್ತಿತರೆ ಗ್ರಾಮಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.