ADVERTISEMENT

ದೇವಾಲಯ ಅಭಿವೃದ್ಧಿಗೆ ಹಣ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2011, 19:30 IST
Last Updated 15 ಅಕ್ಟೋಬರ್ 2011, 19:30 IST

ಮಾಗಡಿ: ತಾಲ್ಲೂಕಿನ ತಿರುಮಲ ಶ್ರೀರಂಗನಾಥ ಸ್ವಾಮಿ ದೇವಾಲಯದ ಗೋಪುರ ದುರಸ್ತಿಗೆ ರೂ.50ಲಕ್ಷ ಮತ್ತು ಕೋಟೆ ಅಭಿವೃದ್ಧಿಗೆ ರೂ.1 ಕೋಟಿ ಹಣವನ್ನು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರು ಬಿಡುಗಡೆ ಮಾಡಿದ್ದಾರೆ ಎಂದು  ಶ್ರೀರಂಗ ಸೇವಾ ಟ್ರಸ್ಟ್ ಅಧ್ಯಕ್ಷ  ಟಿ.ಎಸ್.ಸತೀಶ್ ತಿಳಿಸಿದರು.

ತಿರುಮಲ ಶ್ರೀರಂಗ ಸೇವಾ ಟ್ರಸ್ಟ್ ಪದಾಧಿಕಾರಿಗಳು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಸಲ್ಲಿಸಿದ ಮನವಿಯ ಮೇರೆಗೆ ಹಣ ಬಿಡುಗಡೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಮಾಗಡಿಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು ಎಂದು ಸತೀಶ್ ತಿಳಿಸಿದರು. ನೆಲಮಂಗಲ ಶಾಸಕ ಎಂ.ವಿ, ನಾಗರಾಜು, ಬಿ.ಜೆ.ಪಿ.ಮುಖಂಡರಾದ ಎಂ.ಟಿ.ಶಿವಣ್ಣ, ನಾರಾಯಣ ಸ್ವಾಮಿ, ವೆಂಕಟೇಶ್ ಅಯ್ಯಾಂಗಾರ್ ಹಾಗೂ ಟ್ರಸ್ಟ್‌ನ ಎಲ್ಲಾ ಪದಾಧಿಕಾರಿಗಳು ಇದ್ದರು.

ಮನವಿ: ಶ್ರೀರಂಗನಾಥ ಸ್ವಾಮಿ ದೇವಾಲಯದ ದುರಸ್ತಿಯನ್ನು ಶ್ರೀರಂಗ ಸೇವಾ ಟ್ರಸ್ಟ್ ವತಿಯಿಂದಲೇ ಮಾಡಿಸಬೇಕಿದೆ. ದುರಸ್ತಿ ಕಾರ್ಯದಲ್ಲಿ ಗುಣಮಟ್ಟ ಕಾಪಾಡಿಕೊಳ್ಳ ಬೇಕು. ಗೋಪುರದ ಮೊದಲಿನ ವಾಸ್ತುಶಿಲ್ಪಕ್ಕೆ ದಕ್ಕೆಯಾಗದ ರೀತಿಯಲ್ಲಿ ದರುಸ್ತಿ ಮಾಡಿಸಬೇಲು ಎಂದು ಶ್ರೀರಂಗನಾಥ ಸ್ವಾಮಿ ಭಕ್ತ ಮಂಡಳಿಯು ಟ್ರಸ್ಟ್ ಪದಾಧಿಕಾರಿಗಳಿಗೆ ಮನವಿ ಮಾಡಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.