ಕನಕಪುರ: ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷ ಜಯಭೇರಿ ಬಾರಿಸಲಿದ್ದು ಬಿ.ಜೆ.ಪಿ. ಕಾರ್ಯತಂತ್ರ ಇಲ್ಲಿ ಫಲಿಸುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಸ್.ರವಿ ಹೇಳಿದರು.
ಕಸಬಾ ಹೋಬಳಿ ಚೀರಣಕುಪ್ಪೆ ಗ್ರಾಮದ ಬಸವೇಶ್ವರಸ್ವಾಮಿ ದೇವಾಲ ಯದಲ್ಲಿ ಸಂಸದ ಡಿ.ಕೆ.ಸುರೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ಚೀರಣಕುಪ್ಪೆ ಮಹೇಶ್ ಏರ್ಪಡಿಸಿದ್ದ ವಿಶೇಷ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಜನತೆ ನೀಡಿರುವ ತೀರ್ಪು ಸ್ವಾಗತಿಸುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆ ಯಲ್ಲಿ ಎಲ್ಲರೂ ಒಪ್ಪಲೇಬೇಕಾಗಿದೆ ತಿಳಿಸಿದರು. ಎರಡೂ ರಾಜ್ಯಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸವಿತ್ತು. ಆದರೆ ಅದು ಹಾಗಾಗಿಲ್ಲ, ಜಾತ್ಯತೀತ ವ್ಯವಸ್ಥೆಗೆ ಇದು ಮಾರಕವೆಂದು ಬೇಸರ ವ್ಯಕ್ತಪಡಿಸಿದರು.
ಒಟ್ಟಾರೆ ಮತದಾನದ ಶೇಕಡವಾರು ಮತಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತ ಲಭಿಸಿವೆ. ಎರಡು ಚುನಾವಣೆಯ ಫಲಿತಾಂಶ ಕರ್ನಾಟಕದ ಮೇಲೆ ಯಾವ ಪ್ರಭಾವ ಬೀರುವುದಿಲ್ಲ. ಇಲ್ಲಿನ ರಾಜಕಾರಣವೇ ಬೇರೆ ಅಲ್ಲಿಯ ರಾಜಕಾ ರಣವೇ ಬೇರೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಮುಖ್ಯ ಮಂತ್ರಿ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿ ಜನಪ್ರಿಯ ಕೆಲಸ ಮಾಡಿದ್ದಾರೆ ಎಂದರು. ತಾ.ಪಂ. ಅಧ್ಯಕ್ಷ ರಾಜಶೇಖರ್, ಮಹೇಶ್, ನಗರಸಭೆ ಸದಸ್ಯ ರಾಮ ಚಂದ್ರ, ಪ್ರಾಧಿಕಾರದ ಅಧ್ಯಕ್ಷ ಎಸ್.ಎಸ್.ಶಂಕರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವಿ.ಶ್ರೀನಿವಾಸ್, ಮುಖಂಡರಾದ ಎಂ.ಡಿ.ವಿಜಯದೇವು, ಪುಟ್ಟಮಾದೇಗೌಡ, ರಮೇಶ್, ಗುಂಡಣ್ಣ, ವೆಂಕಟಪ್ಪ, ನಾಗರಾಜು, ಚಂದ್ರಶೇಖರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.