ADVERTISEMENT

ರಾಮನಗರ: ಗಂಡು ಚಿರತೆ ಸೆರೆ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2017, 5:56 IST
Last Updated 29 ಡಿಸೆಂಬರ್ 2017, 5:56 IST

ರಾಮನಗರ: ತಾಲ್ಲೂಕಿನ ಮುನಿಯಪ್ಪನದೊಡ್ಡಿ ಗ್ರಾಮದ ಕೃಷ್ಣಪ್ಪ ಎಂಬುವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಬುಧವಾರ ರಾತ್ರಿ ಚಿರತೆಯೊಂದು ಸೆರೆಯಾಗಿದೆ.

ಆರು ವರ್ಷ ಪ್ರಾಯದ ಗಂಡು ಚಿರತೆ ಇದಾಗಿದೆ. ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಈ ಕಾಡುಪ್ರಾಣಿ ಉಪಟಳ ಹೆಚ್ಚಾಗಿತ್ತು. ಆಗಾಗ್ಗೆ ಊರಿನ ಒಳಗೆ ನುಗ್ಗಿ ಜನರಲ್ಲಿ ಭೀತಿ ಹುಟ್ಟಿಸುತ್ತಿದ್ದ ಚಿರತೆ, ಹತ್ತಕ್ಕೂ ಹೆಚ್ಚು ಕುರಿಗಳನ್ನು ತಿಂದು ಹಾಕಿತ್ತು.

ಈ ಹಿನ್ನೆಲೆಯಲ್ಲಿ ಅದನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಯನ್ನು ಒತ್ತಾಯಿಸಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಸೆರೆಯಾದ ಚಿರತೆಯನ್ನು ಸ್ಥಳಾಂತರಿಸಿದರು. ಅದರ ಆರೋಗ್ಯ ಪರೀಕ್ಷೆ ಬಳಿಕ ಕಾಡಿಗೆ ಬಿಡುವುದಾಗಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.