ADVERTISEMENT

ವಿಶ್ವನಾಥ್ ವಿರುದ್ಧ ಕಿಡಿ: ಧರಣಿ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2011, 19:30 IST
Last Updated 12 ಏಪ್ರಿಲ್ 2011, 19:30 IST

ಚನ್ನಪಟ್ಟಣ:  ಶಾಸಕ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಅಪಮಾನಕಾರಿಯಾಗಿ ಮಾತನಾಡಿರುವ ಸಂಸದ ಎಚ್.ವಿಶ್ವನಾಥ್ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಡಿ.ಕೆ.ಶಿವಕುಮಾರ್ ಅವರ ಅಭಿಮಾನಿಗಳು ನಗರದ ಷೇರು ಹೋಟೆಲ್ ವೃತ್ತದಲ್ಲಿ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು.

ಡಿಕೆಶಿಯವರನ್ನು ಹುಚ್ಚ ಎಂದಿರುವ ವಿಶ್ವನಾಥ್ ಅವರೇ ದೊಡ್ಡ ಹುಚ್ಚರು. ಈ ಕೂಡಲೇ ಕ್ಷಮೆಯಾಚಿಸದಿದ್ದಲ್ಲಿ ಅವರ ನಿವಾಸದ ಎದುರು ಉಗ್ರ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.