ADVERTISEMENT

ಸೋಮವಾರವೂ ಮುಂದುವರೆದ ಮಳೆ

ರಾಮನಗರ ಜಿಲ್ಲೆಯಾದ್ಯಂತ ಮಳೆರಾಯನ ಆರ್ಭಟ

​ಪ್ರಜಾವಾಣಿ ವಾರ್ತೆ
Published 21 ಮೇ 2018, 14:17 IST
Last Updated 21 ಮೇ 2018, 14:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಮನಗರ: ಜಿಲ್ಲೆಯಾದ್ಯಂತ ಸೋಮವಾರವು ಮಳೆ ಮುಂದುವರೆದಿದೆ. ಸಂಜೆ ಸುಮಾರು 6.30ರ ಸಮಯದಲ್ಲಿ  ಗುಡುಗು ಮಿಂಚು ಸಹಿತ ಮಳೆರಾಯ ಆರ್ಭಟಿಸಿದ್ದಾನೆ.

ಸ್ವಲ್ಪ ಸಮಯದ ನಂತರ ತುಂತುರು ಹನಿಯಂತೆ ಮಳೆ ಮಂದುವರೆದಿದ್ದು. ಭಾನುವಾರ ರಾತ್ರಿ ಚನ್ನಪಟ್ಟಣ ತಾಲ್ಲೂಕಿನಲ್ಲಿ ಹೆಚ್ಚು ಮಳೆಯಾಗಿದೆ. ಸರಾಸರಿ 22 ಮಿಲಿಮೀಟರ್‌ನಷ್ಟು ಮಳೆಯಾಗಿದೆ ಎಂದು ದಾಖಲಾಗಿದೆ.

ಮಾಗಡಿ ತಾಲ್ಲೂಕಿನಲ್ಲಿ 18 ಮಿ.ಮೀ , ಕನಕಪುರ 15 ಮಿ.ಮೀ. ಹಾಗೂ ರಾಮನಗರದಲ್ಲಿ 13 ಮಿ.ಮೀ. ನಷ್ಟು ಸರಾಸರಿ ಮಳೆಯಾಗಿದೆ. ನಿರಂತರ ಮಳೆಯಿಂದಾಗಿ ತಾಪಮಾನದ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ರಾತ್ರಿ ಚಳಿಯ ವಾತಾವರಣ ಸೃಷ್ಠಿಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.