ರಾಮನಗರ: ಜಿಲ್ಲೆಯಾದ್ಯಂತ ಸೋಮವಾರವು ಮಳೆ ಮುಂದುವರೆದಿದೆ. ಸಂಜೆ ಸುಮಾರು 6.30ರ ಸಮಯದಲ್ಲಿ ಗುಡುಗು ಮಿಂಚು ಸಹಿತ ಮಳೆರಾಯ ಆರ್ಭಟಿಸಿದ್ದಾನೆ.
ಸ್ವಲ್ಪ ಸಮಯದ ನಂತರ ತುಂತುರು ಹನಿಯಂತೆ ಮಳೆ ಮಂದುವರೆದಿದ್ದು. ಭಾನುವಾರ ರಾತ್ರಿ ಚನ್ನಪಟ್ಟಣ ತಾಲ್ಲೂಕಿನಲ್ಲಿ ಹೆಚ್ಚು ಮಳೆಯಾಗಿದೆ. ಸರಾಸರಿ 22 ಮಿಲಿಮೀಟರ್ನಷ್ಟು ಮಳೆಯಾಗಿದೆ ಎಂದು ದಾಖಲಾಗಿದೆ.
ಮಾಗಡಿ ತಾಲ್ಲೂಕಿನಲ್ಲಿ 18 ಮಿ.ಮೀ , ಕನಕಪುರ 15 ಮಿ.ಮೀ. ಹಾಗೂ ರಾಮನಗರದಲ್ಲಿ 13 ಮಿ.ಮೀ. ನಷ್ಟು ಸರಾಸರಿ ಮಳೆಯಾಗಿದೆ. ನಿರಂತರ ಮಳೆಯಿಂದಾಗಿ ತಾಪಮಾನದ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ರಾತ್ರಿ ಚಳಿಯ ವಾತಾವರಣ ಸೃಷ್ಠಿಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.