ರಾಮನಗರ: ಮಾಗಡಿ ತಾಲ್ಲೂಕಿನ ಗೆಜ್ಜಗಾರುಗುಪ್ಪೆ ಬಳಿ ಭಾನುವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟರು.
ಮಂಡ್ಯ ಜಿಲ್ಲೆಯ ರಾಜಶೆಟ್ಟಿಪುರದ ನಿವಾಸಿಗಳಾದ ರಾಮಕೃಷ್ಣ (45) ಮೂಗು ಹಿರೇಗೌಡ (50) ಮೃತರು. ದ್ವಿಚಕ್ರ ವಾಹನದಲ್ಲಿ ಗೆಜ್ಜಗಾರು ಗುಪ್ಪೆಯ ಅತ್ತೆಯ ಮನೆಗೆ ಬರುವ ಬರುವಾಗ ವಾಹನವೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದರು.
ಶವಗಳನ್ನು ಮಾಗಡಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಡಿಕ್ಕಿ ಹೊಡೆದ ವಾಹನ ಹುಡುಕಲು ಸಿಸಿಟಿವಿಗಳನ್ನು ಪೊಲೀಸರು ಶೋಧಿಸುತ್ತಿದ್ದಾರೆ. ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.