ಚನ್ನಪಟ್ಟಣ: ‘ಪಟ್ಟಣದ ದಿ ಟೌನ್ ಕೋ ಆಪರೇಟಿವ್ ಸೊಸೈಟಿಯು 2020-21ನೇ ಸಾಲಿನಲ್ಲಿ ₹ 2.91 ಲಕ್ಷ ಲಾಭಗಳಿಸಿದೆ’ ಎಂದು ಸೊಸೈಟಿ ಅಧ್ಯಕ್ಷ ಎಲ್.ಎಸ್.ಆರ್. ಶ್ರೀಧರ್ ತಿಳಿಸಿದರು.
ಪಟ್ಟಣದ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ಗುರುವಾರ ನಡೆದ 2020-21ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರ ಸಹಕಾರದಿಂದ ಕೊರೊನಾ ನಡುವೆಯೂ ಪ್ರಗತಿಯತ್ತ ಸಾಗುತ್ತಿದೆ ಎಂದರು.
ಸಭೆಯಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಂಘದ ಉಪಾಧ್ಯಕ್ಷ ರವಿಕುಮಾರ್, ನಿರ್ದೇಶಕರಾದ ಲಕ್ಷ್ಮಣ್ ಸಿಂಗ್, ಸಿ.ಎನ್. ಧರ್ಮಪ್ರಕಾಶ್, ವಿಷಕಂಠ, ಸಿ.ವಿ. ಶಂಕರರೆಡ್ಡಿ, ಆರ್. ರಂಗಸ್ವಾಮಿ, ಶ್ರೀಮತಿ, ಕಲಾವತಿ, ಅಪ್ಪಸ್ವಾಮಿ, ನಂದಕುಮಾರ್, ಸಿಬ್ಬಂದಿ ಗೋಪಾಲರಾವ್ ಹಾಜರಿದ್ದರು. ಸಂಘದ ಕಾರ್ಯದರ್ಶಿ ಟಿ.ಎಲ್. ಮಂಜು 2020-21ನೇ ಸಾಲಿನ ಆಡಿಟ್ ವರದಿ ಮಂಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.