ರಾಮನಗರ: ಜಿಲ್ಲೆಯಲ್ಲಿ ಗುರುವಾರ 47 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.
ಚನ್ನಪಟ್ಟಣ 14, ಕನಕಪುರ 19, ಮಾಗಡಿ 6 ಮತ್ತು ರಾಮನಗರ 8 ಪ್ರಕರಣಗಳು ಇದರಲ್ಲಿ ಸೇರಿವೆ. ಜಿಲ್ಲೆಯಲ್ಲಿ ಈವರೆಗೆ 5262 ಪ್ರಕರಣಗಳು ದಾಖಲಾಗಿವೆ. ಚನ್ನಪಟ್ಟಣ 1268, ಕನಕಪುರ 1095, ಮಾಗಡಿ 814 ಮತ್ತು ರಾಮನಗರ 2085 ಪ್ರಕರಣಗಳು ಇದರಲ್ಲಿ ಸೇರಿವೆ. ಸೋಂಕಿನಿಂದಾಗಿ ಜಿಲ್ಲೆಯಲ್ಲಿ ಈವರೆಗೆ 53 ಮಂದಿ ನಿಧನರಾಗಿದ್ದಾರೆ.
ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 17, ಕನಕಪುರ ತಾಲ್ಲೂಕಿನಲ್ಲಿ 12, ಮಾಗಡಿ ತಾಲ್ಲೂಕಿನಲ್ಲಿ 9 ಹಾಗೂ ರಾಮನಗರ ತಾಲ್ಲೂಕಿನಲ್ಲಿ 6 ಸೇರಿ ಒಟ್ಟಾರೆ 44 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 4315 ಜನರು ಗುಣಮುಖರಾಗಿದ್ದಾರೆ. ಇನ್ನೂ 894 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.