ADVERTISEMENT

ಸೋಂಕಿತ ವ್ಯಕ್ತಿ ಜೊತೆ ಸಂಪರ್ಕ: ಐವರ ಮಾದರಿ ಪರೀಕ್ಷೆಗೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2020, 12:15 IST
Last Updated 8 ಏಪ್ರಿಲ್ 2020, 12:15 IST

ರಾಮನಗರ: ಹೊಸಕೋಟೆಯ ವ್ಯಕ್ತಿಯೊಬ್ಬರಿಗೆ ಕೋವಿಡ್-19 ಸೋಂಕು ತಗುಲಿದ್ದು, ಚನ್ನಪಟ್ಟಣದಲ್ಲಿ ಇರುವ ಅವರ ಸಂಬಂಧಿಕರನ್ನೂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ದೆಹಲಿಯಲ್ಲಿ ನಡೆದ ತಬ್ಲಿಬಿ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಈ ವ್ಯಕ್ತಿ ಬಳಿಕ ಹೊಸಕೋಟೆಗೆ ವಾಪಸ್‌ ಆಗಿದ್ದರು. ತರುವಾಯ ಚನ್ನಪಟ್ಟಣದಲ್ಲಿ ಇರುವ ತನ್ನ ಬಂಧುಗಳ ಮನೆಗೂ ಬಂದಿದ್ದು, ಇಲ್ಲಿಯೇ ಒಂದೂವರೆ ದಿನ ತಂಗಿದ್ದರು ಎನ್ನಲಾಗಿದೆ. ಆ ವ್ಯಕ್ತಿಗೆ ಸೋಂಕು ಇರುವುದು ಖಾತ್ರಿಯಾಗುತ್ತಿದ್ದಂತೆ ಅವರ ಓಡಾಟದ ವಿವರಗಳನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಕಲೆ ಹಾಕಿದ್ದರು. ಈ ಸಂದರ್ಭ ಅವರು ಚನ್ನಪಟ್ಟಣಕ್ಕೂ ಭೇಟಿ ನೀಡಿರುವುದು ಪತ್ತೆಯಾಯಿತು.

ಈ ಹಿನ್ನೆಲೆಯಲ್ಲಿ ಆರೋಗ್ಯಾಧಿಕಾರಿಗಳು ಚನ್ನಪಟ್ಟಣಕ್ಕೆ ಭೇಟಿ ನೀಡಿದ್ದು, ಸೋಂಕಿತನ ಐವರು ಸಂಬಂಧಿಕರನ್ನು ಸಮೀಪದ ಸಮುದಾಯ ಕ್ವಾರಂಟೈನ್‌ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ. ಐವರ ಗಂಟಲ ದ್ರವ ಹಾಗೂ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಇನ್ನಷ್ಟೇ ಬರಬೇಕಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.