ADVERTISEMENT

ಬಸ್ ಡಿಕ್ಕಿ: ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 7 ಜನವರಿ 2018, 5:55 IST
Last Updated 7 ಜನವರಿ 2018, 5:55 IST

ರಾಮನಗರ: ನಗರದ ಹೊರವಲಯದಲ್ಲಿರುವ ವಡೇರಹಳ್ಳಿ ಬಳಿ ಭಾನುವಾರ ಬೆಳಿಗ್ಗೆ ಬೆಂಗಳೂರು ಮೈಸೂರು ಹೆದ್ದಾರಿ ಬದಿಯಲ್ಲಿ ನಿಂತಿದ್ದ ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟರು.

ವಡೇರಹಳ್ಳಿ ನಿವಾಸಿ ಕೃಷ್ಣಪ್ಪ (40) ಮೃತರು. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ.‌ ಹೆದ್ದಾರಿಯಲ್ಲಿ ಬಿಗುವಿನ ವಾತಾವರಣ ಇದ್ದು, ಉದ್ರಿಕ್ತರು ಬಸ್ ಗಾಜು ಒಡೆದು ಪ್ರತಿಭಟನೆ ನಡೆಸಿದರು‌. ರಾಮನಗರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT