ಮಾಗಡಿ: ತಿಪ್ಪಗೊಂಡನಹಳ್ಳಿ ಚಾಮರಾಜ ಸಾಗರ ಜಲಾಶಯದಿಂದ ವ್ಯರ್ಥವಾಗಿ ಹರಿಯುತ್ತಿರುವ ನೀರು ನಿಲ್ಲಿಸದಿದ್ದರೆ ರೈತರು ಜಲಾಶಯಕ್ಕೆ ಇಳಿದು ಪ್ರತಿಭಟನೆ ನಡೆಸಲಿದ್ದಾರೆ ಎಂದು ತಾಲ್ಲೂಕು ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ಎಚ್ಚರಿಸಿದ್ದಾರೆ.
ಪದಾಧಿಕಾರಿಗಳೊಂದಿಗೆ ಗುರುವಾರ ಜಲಾಶಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಪೋಲಾಗುತ್ತಿರುವ ನೀರು ನಿಲ್ಲಿಸುವ ಬಗ್ಗೆ ಚರ್ಚಿಸಲು ಫೆ.10ರಂದು ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳ ಸಭೆ ಕರೆಯಲಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.