ADVERTISEMENT

79 ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2020, 15:06 IST
Last Updated 9 ಅಕ್ಟೋಬರ್ 2020, 15:06 IST

ರಾಮನಗರ: ಜಿಲ್ಲೆಯಲ್ಲಿ ಶುಕ್ರವಾರ 79 ಮಂದಿಯಲ್ಲಿ ಕೋವಿಡ್‌ ಸೋಂಕು ದೃಢವಾಗಿದೆ.

ಚನ್ನಪಟ್ಟಣ 20, ಕನಕಪುರ 28, ಮಾಗಡಿ 12 ಮತ್ತು ರಾಮನಗರ 19 ಪ್ರಕರಣಗಳು ಇದರಲ್ಲಿ ಸೇರಿವೆ. ಇದುವರೆಗೆ ಜಿಲ್ಲೆಯಲ್ಲಿ 6266 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 1508, ಕನಕಪುರ 1369, ಮಾಗಡಿ 983 ಮತ್ತು ರಾಮನಗರ 2406 ಪ್ರಕರಣಗಳು ವರದಿಯಾಗಿವೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 23, ಕನಕಪುರ ತಾಲ್ಲೂಕಿನಲ್ಲಿ 22, ಮಾಗಡಿ ತಾಲ್ಲೂಕಿನಲ್ಲಿ 14 ಹಾಗೂ ರಾಮನಗರ ತಾಲ್ಲೂಕಿನಲ್ಲಿ 42 ಜನ ಸೇರಿ ಒಟ್ಟಾರೆ 101 ಜನರು ಶುಕ್ರವಾರ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 5504 ಜನರು ಗುಣಮುಖರಾಗಿದ್ದಾರೆ. ಇನ್ನೂ 703 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.