ರಾಮನಗರ: ಜಿಲ್ಲೆಯಲ್ಲಿ ಶನಿವಾರ79 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.
ಚನ್ನಪಟ್ಟಣ 21, ಕನಕಪುರ 16, ಮಾಗಡಿ 12 ಮತ್ತು ರಾಮನಗರ 30 ಪ್ರಕರಣಗಳು ಇದರಲ್ಲಿ ಸೇರಿವೆ. ಇದುವರೆಗೆ ಜಿಲ್ಲೆಯಲ್ಲಿ 5366 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 1295, ಕನಕಪುರ 1114, ಮಾಗಡಿ 830 ಮತ್ತು ರಾಮನಗರ 2127 ಪ್ರಕರಣಗಳು ಸೇರಿವೆ. ಕನಕಪುರ ತಾಲ್ಲೂಕಿನಲ್ಲಿ ಒಬ್ಬರು ಮೃತಪಟ್ಟಿದ್ದು, ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ೫೪ಕ್ಕೆ ಏರಿದೆ.
ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 18, ಕನಕಪುರ ತಾಲ್ಲೂಕಿನಲ್ಲಿ 22, ಮಾಗಡಿ ತಾಲ್ಲೂಕಿನಲ್ಲಿ 19 ಹಾಗೂ ರಾಮನಗರ ತಾಲ್ಲೂಕಿನಲ್ಲಿ 13 ಸೇರಿ ಒಟ್ಟಾರೆ 72 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 4440 ಜನರು ಗುಣಮುಖರಾಗಿದ್ದಾರೆ. ಇನ್ನೂ 872 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.