ADVERTISEMENT

ರಾಮನಗರ | ಮಹಿಳೆ ಮೇಲೆ ಕರಡಿ ದಾಳಿ

​ಪ್ರಜಾವಾಣಿ ವಾರ್ತೆ
Published 27 ಮೇ 2020, 5:36 IST
Last Updated 27 ಮೇ 2020, 5:36 IST
ಸಾಕಮ್ಮ
ಸಾಕಮ್ಮ   

ರಾಮನಗರ: ಚನ್ನಪಟ್ಟಣ ನಗರದ ಸುಣ್ಣದ ಕೇರಿಯಲ್ಲಿ ಬುಧವಾರ ನಸುಕಿನಲ್ಲಿ ಕರಡಿಯೊಂದು ಮಹಿಳೆ ಮೇಲೆ ದಾಳಿ ನಡೆಸಿದೆ.

ನಗರಸಭೆಯ ಮಾಜಿ ಸದಸ್ಯೆ ಸಾಕಮ್ಮ (65) ಅವರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ರಕ್ಷಣೆಗೆ ಧಾವಿಸಿದ ಪುತ್ರ ಸುಧೀರ್ (40) ಸಹ ಗಾಯಗೊಂಡಿದ್ದಾರೆ.

ಬೆಳಗ್ಗೆ ಮನೆಯಿಂದ ಹೊರಗೆ ಬಂದ ಸಂದರ್ಭ ಕಾಂಪೌಂಡ್‌ನ ಒಳಗೇ ಕರಡಿ ದಾಳಿ ನಡೆಸಿತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.