ರಾಮನಗರ: ಬಸ್ ಹರಿದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಮಾಗಡಿ ತಾಲ್ಲೂಕಿನ ಹೊನ್ನಾಪುರದ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.
ಜೀವಿತಾ (6) ಮೃತ ಬಾಲಕಿ. ಆಕೆ ಬೆಂಗಳೂರಿನಿಂದ ತನ್ನ ಅಜ್ಜಿ ಜತೆ ಉಜ್ಜಿನಿಗೆ ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದಳು. ಈ ವೇಳೆ ಬಸ್ ನ ಟೈರ್ ಸ್ಫೋಟಗೊಂಡಿದ್ದು, ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಾನೆ. ಈ ಸಂದರ್ಭ ಬಸ್ ನ ಮುಂಭಾಗದ ಗಾಜಿನ ಬಳಿಯೇ ಕುಳಿತಿದ್ದ ಬಾಲಕಿ, ನಿಯಂತ್ರಣ ತಪ್ಪಿ ಗಾಜು ಒಡೆದುಕೊಂಡು ಬಸ್ನ ಮುಂದೆಯೇ ಬಿದ್ದಿದ್ದಾಳೆ. ನಂತರ ಅದೇ ಬಸ್ ನ ಮುಂಭಾಗದ ಚಕ್ರ ಬಾಲಕಿ ಮೇಲೆ ಹರಿದಿದೆ. ಇದರಿಂದ ಸ್ಥಳದಲ್ಲೇ ಬಾಲಕಿ ಮೃತಪಟ್ಟಿದ್ದಾಳೆ.
ಕುಮಾರ್ ಹಾಗೂ ಜ್ಯೋತಿ ದಂಪತಿಗೆ ಈಕೆ ಏಕೈಕ ಪುತ್ರಿಯಾಗಿದ್ದು, ಕುಟುಂಬದವರ ರೋಧನ ಹೆಚ್ಚಿತ್ತು. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.