ADVERTISEMENT

ಕನಕಪುರ: ಕೋಳಿ ಫಾರಂಗೆ ನುಗ್ಗಿದ ಚಿರತೆ ಸೆರೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2023, 4:41 IST
Last Updated 1 ಮಾರ್ಚ್ 2023, 4:41 IST
ಸೆರೆಯಾಗಿರುವ ಚಿರತೆ
ಸೆರೆಯಾಗಿರುವ ಚಿರತೆ   

ಕನಕಪುರ: ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿಯ ಮೂಲೆಗುಂದಿ ಗ್ರಾಮದ ಕೋಳಿ ಫಾರಂನಲ್ಲಿ ಸೋಮವಾರ ರಾತ್ರಿ ಚಿರತೆಯೊಂದು ಸೆರೆ ಸಿಕ್ಕಿದೆ.

ಪ್ರಕಾಶ್‌ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ನಾಲ್ಕೈದು ಕೋಳಿ ಗಳಿದ್ದವು. ಅವುಗಳನ್ನು ತಿನ್ನಲು ಹೋದ ಚಿರತೆಯನ್ನು ಕಂಡ ಅಕ್ಕಪಕ್ಕದ ಜಮೀನಿನಲ್ಲಿದ್ದ ರೈತರು ಫಾರಂನ ಬಾಗಿಲು ಹಾಕಿದ್ದಾರೆ. ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸಾತನೂರು ವಲಯ ಅರಣ್ಯ ಅಧಿಕಾರಿ ಆಶಾ ತಮ್ಮ ಸಿಬ್ಬಂದಿ ಜತೆಗೂಡಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ರಾತ್ರಿ ಆಗಿದ್ದರಿಂದ ತುಂಬಾ ಜಾಗರೂಕತೆಯಿಂದ ಕಾರ್ಯಾಚರಣೆ ನಡೆಸಿದರು. ಚಿರತೆ ನೋಡಲು ಸೇರಿದ್ದ ಜನರನ್ನು ಕೋಳಿ ಫಾರಂನಿಂದ ದೂರ ಕಳುಹಿಸಿದರು. ಚೀಪಿನಲ್ಲಿ ಫಾರಂ ಬಳಿ ಹೋಗಿ ಬಾಗಿಲನ್ನು ತೆಗೆದಿದ್ದಾರೆ. ಬಳಿಕ ಚಿರತೆ ಅಲ್ಲಿಂದ ಸುರಕ್ಷಿತವಾಗಿ ಹೊರಗೆ ಓಡಿ ಹೋಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.