ರಾಮನಗರ: ಇ-ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಬಿಡದಿ ಹೋಬಳಿಯ ಮಂಚನಾಯ್ಕನಹಳ್ಳಿ ಗ್ರಾಮ ಪಂಚಾಯಿತಿಪಿಡಿಒ ಶಮೀದ್ ಓಲೇಕಾರ್ ಎಸಿಬಿ ಬಲೆಗೆ ಬಿದ್ದರು.
ಆಸ್ತಿ ಮಾಲೀಕರು ಇ-ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದು, ಅದಕ್ಕಾಗಿ ಪಿಡಿಒ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅರ್ಜಿದಾರರು ಈ ವಿಷಯವನ್ನು ಎಸಿಬಿ ಗಮನಕ್ಕೆ ತಂದು ಅವರ ಸೂಚನೆಯಂತೆ ಬುಧವಾರ ಬೆಳಿಗ್ಗೆ ಕೆಂಗೇರಿಯ ತಮ್ಮ ನಿವಾಸದಲ್ಲಿ ಪಿಡಿಒಗೆ ಒಂದು ಲಕ್ಷ ರೂಪಾಯಿ ನೀಡುವ ವೇಳೆ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.