ADVERTISEMENT

ಉಪ ನೋಂದಣಾಧಿಕಾರಿ ಕಚೇರಿಗಳ ಮೇಲೆ ದಾಳಿ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2021, 16:09 IST
Last Updated 19 ಫೆಬ್ರುವರಿ 2021, 16:09 IST
ಮಾಗಡಿ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿದರು
ಮಾಗಡಿ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿದರು   

ರಾಮನಗರ: ಜಿಲ್ಲೆಯ ರಾಮನಗರ ಹಾಗೂ ಮಾಗಡಿ ಉಪ ನೋಂದಣಾಧಿಕಾರಿ ಕಚೇರಿ ಹಾಗೂ ಸುತ್ತಲಿನ ಪತ್ರ ಬರಹಗಾರರ ಕಚೇರಿಗಳ ಮೇಲೆ ಶುಕ್ರವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದರು.

ರಾಮನಗರದಲ್ಲಿ ಮೂವತ್ತು ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪ್ರತಿ ಕಚೇರಿಯಲ್ಲೂ ಶೋಧ ನಡೆಸಿತ್ತು. ರಾತ್ರಿಯಾದರೂ ಈ ಕಾರ್ಯಾಚರಣೆ ನಿಂತಿರಲಿಲ್ಲ. ಮಾಗಡಿ ಕಚೇರಿಯಲ್ಲೂ ಅಧಿಕಾರಿಗಳಿಂದ ತಪಾಸಣೆ ಮುಂದುವರಿದಿತ್ತು. ದಾಳಿ ಸಂದರ್ಭ ಕಚೇರಿಗಳನ್ನು ಒಳಗಿನಿಂದ ಮುಚ್ಚಲಾಗಿತ್ತು. ಮಾಗಡಿಯಲ್ಲಿ ಡಿವೈಎಸ್ಪಿ ಮಲ್ಲೇಶ್ ನೇತೃತ್ವದಲ್ಲಿ ದಾಳಿ ನಡೆಯಿತು. ಈ ಸಂದರ್ಭ ಒಂದಿಷ್ಟು ಪ್ರಮಾಣದಲ್ಲಿ ಹಣ ಸಹ ಪತ್ತೆಯಾಯಿತು ಎನ್ನಲಾಗಿದೆ.

ನೋಂದಣಿ ಅಧಿಕಾರಿಗಳ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಕುರಿತು ಸಾರ್ವಜನಿಕರು ಎಸಿಬಿಗೆ ದೂರು ನೀಡಿದ್ದರು. ಇದನ್ನು ಆಧರಿಸಿ ಎಸಿಬಿ ತಂಡ ದಾಳಿ ನಡೆಸಿದೆ. ಎಷ್ಟು ಪ್ರಮಾಣದಲ್ಲಿ ದಾಖಲೆಗಳನ್ನು ವಶಕ್ಕೆ ಪಡೆದಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.