ADVERTISEMENT

ಎಸಿಬಿ ಬಲೆಗೆ ಜಿಲ್ಲಾಸ್ಪತ್ರೆ ಸರ್ಜನ್

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2019, 14:21 IST
Last Updated 31 ಡಿಸೆಂಬರ್ 2019, 14:21 IST
   

ರಾಮನಗರ: ರೋಗಿಯ ಸಂಬಂಧಿಕರೊಬ್ಬರಿಂದ ಲಂಚ ಪಡೆಯುತ್ತಿದ್ದ ಇಲ್ಲಿನ ಜಿಲ್ಲಾಸ್ಪತ್ರೆ ಸರ್ಜನ್ ನಾರಾಯಣ ಸ್ವಾಮಿ ಮಂಗಳವಾರ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದರು.

ನಾರಾಯಣ ಸ್ವಾಮಿ‌ ರಾಮನಗರ ತಾಲ್ಲೂಕಿನ ಜಯಪುರ ಗ್ರಾಮದ ಮಹಿಳೆಯೊಬ್ಬರಿಗೆ ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ ಮಾಡಲು ₹8 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಶಸ್ತ್ರಚಿಕಿತ್ಸೆ ಸಂದರ್ಭ ₹5 ಸಾವಿರ ಪಡೆದಿದ್ದರು. ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲು ಇನ್ನೂ ₹5 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೋಗಿಯ ಸಂಬಂಧಿಕರು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಅವರ ಸೂಚನೆ ಮೇರೆಗೆ ಮಂಗಳವಾರ ₹1500 ನೀಡುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿ ನಾರಾಯಣ ಸ್ವಾಮಿ ಅವರನ್ನು ಬಂಧಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.