ADVERTISEMENT

ಅಪಘಾತ: ಬೈಕ್‌ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 1 ಜನವರಿ 2020, 12:46 IST
Last Updated 1 ಜನವರಿ 2020, 12:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕನಕಪುರ: ಬೈಕ್‌ನಲ್ಲಿ ರಾಮನಗರಕ್ಕೆ ಹೋಗುತ್ತಿದ್ದ ಯುವಕ ವಿದ್ಯುತ್‌ ಕಂಬಕ್ಕೆ ಡಿಕ್ಕಿಹೊಡೆದು ಸಾವನ್ನಪ್ಪಿರುವುದು ನಗರದ ಮೆಳೆಕೋಟೆಯಲ್ಲಿ ಮಂಗಳವಾರ ಮಧ್ಯರಾತ್ರಿ ನಡೆದಿದೆ.

ಮೆಳೆಕೋಟೆ ಗ್ರಾಮದ ಸುಹೇಲ್‌ (19) ಮೃತ ವ್ಯಕ್ತಿ. ಅವರು ದ್ವಿಚಕ್ರ ವಾಹನದಲ್ಲಿ ಕನಕಪುರದಿಂದ ರಾಮನಗರಕ್ಕೆ ಹೋಗುತ್ತಿದ್ದಾಗ ವಿದ್ಯುತ್‌ ಕಂಬಕ್ಕೆ ವಾಹನ ಗುದ್ದಿದೆ.

ತಕ್ಷಣವೇ ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಷ್ಟರಲ್ಲೇ ಅವರು ಮೃತಪಟ್ಟಿದ್ದಾಗಿ ಪರೀಕ್ಷಿಸಿದ ವೈದ್ಯರು ಖಚಿತ ಪಡಿಸಿದರೆಂದು ಪೊಲೀಸರು ತಿಳಿಸಿದ್ದಾರೆ. ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.