ADVERTISEMENT

ರಾಮನಗರದಲ್ಲಿ ಭೀಕರ ಅಪಘಾತ: ಮೂವರು ಯುವಕರು ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2021, 17:57 IST
Last Updated 28 ಆಗಸ್ಟ್ 2021, 17:57 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ರಾಮನಗರ: ನಗರದಮಾಗಡಿ ರಸ್ತೆಯ ರಾಯರದೊಡ್ಡಿ ಬಳಿ ಶನಿವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಿಂದ ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದರು.

ರಾಯರದೊಡ್ಡಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಬಳಿ ಅಪಘಾತ ನಡೆದಿದ್ದು, ರಾಮನಗರ ಬಾಲಗೇರಿಯ‌ ಸಹೋದರರಾದ ಮೂರ್ತಿ (23), ವೆಂಕಟೇಶ್ (33) ಹಾಗೂ ಅಚ್ಚಲುದೊಡ್ಡಿ ನಿವಾಸಿ ರಘು (19) ಮೃತಪಟ್ಟವರು.

ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 ಮಂದಿ ಸಾವನ್ನಪ್ಪಿದರು. ಮೃತ ಯುವಕರ ಶವವನ್ನು ಜಿಲ್ಲಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.