ADVERTISEMENT

ತಗಚಗುಪ್ಪೆ ತಿರುವಿನಲ್ಲಿ ಅಪಘಾತ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2019, 13:23 IST
Last Updated 19 ನವೆಂಬರ್ 2019, 13:23 IST
ಮಾಗಡಿ ಖಾಸಗಿ ಬಸ್‌ ಡಿಕ್ಕಿ ಹೊಡೆದು ನಜ್ಜುಗುಜ್ಜಾಗಿರುವ ಟಾಟಾಏಸ್‌ ವಾಹನ
ಮಾಗಡಿ ಖಾಸಗಿ ಬಸ್‌ ಡಿಕ್ಕಿ ಹೊಡೆದು ನಜ್ಜುಗುಜ್ಜಾಗಿರುವ ಟಾಟಾಏಸ್‌ ವಾಹನ   

ಮಾಗಡಿ: ಖಾಸಗಿ ಬಸ್‌ ಟಾಟಾ ಏಸ್‌ಗೆ ಡಿಕ್ಕಿ ಹೊಡೆದು 8 ಜನ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಗಳವಾರ ಸಂಜೆ 4.55ರಲ್ಲಿ ಬೆಂಗಳೂರು ಮಾಗಡಿ ರಸ್ತೆಯ ತಗಚಗುಪ್ಪೆ ತಿರುವಿನಲ್ಲಿ ನಡೆದಿದೆ.

ಮಾಗಡಿ ಕಡೆಯಿಂದ ಬೆಂಗಳೂರಿಗೆ ಹೊರಟಿದ್ದ ಟಾಟಾ ಏಸ್‌ ವಾಹನವನ್ನು ರಸ್ತೆಯ ಬಲ ಬದಿಯಲ್ಲಿ ನಿಲ್ಲಿಸಿಕೊಂಡು ಅದರೊಳಗೆ ಇದ್ದ ದ್ವಿಚಕ್ರವಾಹನ ಬೀಳದಂತೆ ಹಗ್ಗ ಕಟ್ಟುತ್ತಿದ್ದಾಗ, ನಗರ ಕಡೆಯಿಂದ ಬಂದ ಖಾಸಗಿ ಬಸ್‌ ಡಿಕ್ಕಿ ಹೊಡೆಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಟಾಟಾ ಏಸ್‌ ನಜ್ಜುಗುಜ್ಜಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ತಾವರೆಕೆರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT