ರಾಮನಗರ: ಮಾಗಡಿ ತಾಲ್ಲೂಕಿನ ಗುಡೆಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ಬೆಂಗಳೂರು- ಮಂಗಳೂರು ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ ಸೇತುವೆ ಕಂಬಕ್ಕೆ ಕಾರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟರು.
ಮಂಗಳೂರಿನವರಾದ ಕಿಶನ್ (35), ಮೂನಪ್ಪ (40), ಅಕ್ಷಯ್ (40) ಮೃತರು. ರಾಘವೇಂದ್ರ, ಚಂದ್ರಶೇಖರ್ ಎಂಬುವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿ ಒಟ್ಟು ಆರು ಮಂದಿ ಇದ್ದರು. ಶಬರಿಮಲೆ, ತಿರುಪತಿ ಪ್ರವಾಸ ಮುಗಿಸಿ ಮಂಗಳೂರಿಗೆ ವಾಪಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.