ADVERTISEMENT

ಅಪಘಾತ: ಪಾದಚಾರಿ ಸಾವು

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2019, 13:54 IST
Last Updated 11 ಮಾರ್ಚ್ 2019, 13:54 IST
ನಿಂಗಯ್ಯ
ನಿಂಗಯ್ಯ   

ರಾಮನಗರ: ತಾಲ್ಲೂಕಿನ ಪಾಲಬೋವಿದೊಡ್ಡಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಬೈಕ್‌ ಡಿಕ್ಕಿಯಾಗಿ ಗ್ರಾಮದ ನಿವಾಸಿ ನಿಂಗಯ್ಯ (68) ಮೃತಪಟ್ಟರು.

ಬೆಳಗ್ಗೆ 8 ಗಂಟೆ ಸುಮಾರಿಗೆ ಅವರು ಗ್ರಾಮದ ಹಾಲಿನ ಡೇರಿ ಸಮೀಪ ರಸ್ತೆ ಬದಿಯಲ್ಲಿ ನಡೆದುಕೊಂಡು ಹೊರಟಿದ್ದ ಸಂದರ್ಭ ಬೈಕ್‌ ಡಿಕ್ಕಿಯಾಯಿತು. ಇದರಿಂದ ತಲೆಗೆ ತೀವ್ರ ಪೆಟ್ಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆಗೆ ಸ್ಪಂದಿಸದೇ ಅವರು 10.30ರ ಸುಮಾರಿಗೆ ಕೊನೆಯುಸಿರೆಳೆದರು.

ನಿಂಗಯ್ಯ ಅವರಿಗೆ ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ಮಂಗಳವಾರ ಬೆಳಿಗ್ಗೆ ಪಾಲಬೋವಿದೊಡ್ಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅಪಘಾತದ ಸಂಬಂಧ ರಾಮನಗರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.