ADVERTISEMENT

ರಾಮನಗರ | ಲಾರಿ ಡಿಕ್ಕಿ: ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 13:36 IST
Last Updated 30 ಜೂನ್ 2020, 13:36 IST

ರಾಮನಗರ: ತಾಲ್ಲೂಕಿನ ಮಾಯಗಾನಹಳ್ಳಿ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಂಗಳವಾರ ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾನೆ.

ಬೆಂಗಳೂರು ನಿವಾಸಿ ಅನಂತ್‌ ಕಾಮತ್ (24) ಮೃತ ಯುವಕ. ರಾಮನಗರದ ಖಾಸಗಿ ಬ್ಯಾಂಕ್‌ನ ಉದ್ಯೋಗಿಯಾಗಿದ್ದ ಈತ ನಿತ್ಯ ಬೆಂಗಳೂರಿನಿಂದ ರಾಮನಗರಕ್ಕೆ ಕೆಲಸಕ್ಕೆಂದು ಬರುತ್ತಿದ್ದ. ಅಂತೆಯೇ ಬೆಳಗ್ಗೆ ಕೆಲಸಕ್ಕೆ ಬರುತ್ತಿದ್ದ ವೇಳೆ ಟಿಪ್ಪರ್ ಲಾರಿ ಈತನ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿಯಾಯಿತು. ಇದರಿಂದಾಗಿ ಆತ ಹೆದ್ದಾರಿಗೆ ಬಿದ್ದು ತಲೆಗೆ ತೀವ್ರ ಪೆಟ್ಟಾಗಿ ಮೃತಪಟ್ಟ ಎಂದು ಪೊಲೀಸರು ತಿಳಿಸಿದರು. ರಾಮನಗರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT