ADVERTISEMENT

ಸಮಸಮಾಜ ನಿರ್ಮಾಣ ಅಂಬೇಡ್ಕರ್ ಗುರಿ: ಸಂಪತ್

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2024, 5:03 IST
Last Updated 29 ಏಪ್ರಿಲ್ 2024, 5:03 IST
ಹಾರೋಹಳ್ಳಿ ತಾಲ್ಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ 133ನೇ ಜಯಂತಿ ನಡೆಯಿತು
ಹಾರೋಹಳ್ಳಿ ತಾಲ್ಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ 133ನೇ ಜಯಂತಿ ನಡೆಯಿತು    

ಹಾರೋಹಳ್ಳಿ: ಸಂವಿಧಾನ ಜಾರಿಗೊಳಿಸಿ ಸಮಸಮಾಜ ನಿರ್ಮಾಣ ಮಾಡುವುದೇ ಅಂಬೇಡ್ಕರ್ ಗುರಿಯಾಗಿತ್ತು ಎಂದು ಗ್ರಾಮದ ಯುವ ಮುಖಂಡ ಸಂಪತ್ ತಿಳಿಸಿದರು.

ತಾಲ್ಲೂಕಿನ ಯಡವನಹಳ್ಳಿಯಲ್ಲಿ ಭಾನುವಾರ ನಡೆದ ಅಂಬೇಡ್ಕರ್ 133ನೇ ಜಯಂತಿಯಲ್ಲಿ ಸಂವಿಧಾನ ಪೀಠಿಕೆ ಬೋಧಿಸಿ ಮಾತನಾಡಿದರು. ಅಂಬೇಡ್ಕರ್ ತಮ್ಮೆಲ್ಲ ಜ್ಞಾನ ಉಪಯೋಗಿಸಿಕೊಂಡು ಸಂವಿಧಾನ ರೂಪಿಸಿ, ಸಾಮಾಜಿಕ ನ್ಯಾಯ ಜಾರಿ ಮಾಡುವ ನಿಟ್ಟಿನಲ್ಲಿ ಶ್ರಮಿಸಿದರು ಎಂದರು.

ಈ ದಿಸೆಯಲ್ಲಿ ಅನೇಕ ಏಳು–ಬೀಳು ವೈಯಕ್ತಿಕ ಜೀವನದಲ್ಲಿ ಅನುಭವಿಸಿದರೂ ಯಾವುದೇ ಹಂತದಲ್ಲಿ ಎದೆಗುಂದಲಿಲ್ಲ. ಯುವ ಪೀಳಿಗೆ ಅಂಬೇಡ್ಕರ್ ಜೀವನ ಚರಿತ್ರೆ ಓದಿ ಪಠಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಪ್ರತಿಯೊಬ್ಬರೂ ಘನತೆಯಿಂದ ಬದುಕುವುದಕ್ಕಾಗಿ ಬೇಕಾದ ಹಕ್ಕುಗಳಿಗೆ ಸಂವಿಧಾನದ ಮೂಲಕ ಕಾನೂನಿನ ಮಾನ್ಯತೆ ಕಲ್ಪಿಸಿಕೊಟ್ಟರು ಎಂದು ಹೇಳಿದರು.

ADVERTISEMENT

ಗ್ರಾಮದ ಯುವಕರಾದ ನಾಗೇಶ್, ವೆಂಕಟರಾಮು, ಹೇಮಂತ್, ರಾಮಚಂದ್ರ, ಜಯರಾಮ್, ಚಿಕ್ಕಬಸಮ್ಮ,ಅಶ್ವಿನಿ, ಪದ್ಮ, ರಾಜೇಶ್ವರಿ, ಪದ್ಮ, ವಿಜಯ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.