ರಾಮನಗರ: ಜಿಲ್ಲಾ ಲೋಕಾಯುಕ್ತ ಹಾಗೂ ಜಿಲ್ಲಾ ಕಾನೂನು ಸಲಹೆಗಳ ಪ್ರಾಧಿಕಾರದಿಂದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ನಡೆಯಿತು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಧ್ಯಕ್ಷ ನ್ಯಾ. ಬಿ.ವಿ. ರೇಣುಕ ಕಾರ್ಯಕ್ರಮ ಉದ್ಘಾಟಿಸಿ, ಭ್ರಷ್ಟಾಚಾರ ಪ್ರತಿಬಂಧ ಅಧಿನಿಯಮ-1988 (ತಿದ್ದುಪಡಿ ಕಾಯ್ದೆ-2018) ಮತ್ತು ಭ್ರಷ್ಟಾಚಾರ ತಡೆಗಟ್ಟುವ ಬಗ್ಗೆ ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಪಿ.ಆರ್ ಸವಿತ ಭ್ರಷ್ಟಾಚಾರ ವಿರುದ್ಧ ಜಾಗೃತಿ ಕುರಿತು ಮಾತನಾಡಿದರು.
ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಪಿ.ವಿ. ಸ್ನೇಹ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಲೋಕಾಯುಕ್ತ ಠಾಣೆಯ ಡಿವೈಎಸ್ಪಿ ಎಸ್. ಸುಧೀರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.