ADVERTISEMENT

ರಾಮನಗರ: ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 12:34 IST
Last Updated 27 ಸೆಪ್ಟೆಂಬರ್ 2020, 12:34 IST
ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ ಕಾಂಗ್ರೆಸ್ ಮುಖಂಡ ಚೇತನ್‌ಕುಮಾರ್‍ ಚಾಲನೆ ನೀಡಿದರು
ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ ಕಾಂಗ್ರೆಸ್ ಮುಖಂಡ ಚೇತನ್‌ಕುಮಾರ್‍ ಚಾಲನೆ ನೀಡಿದರು   

ರಾಮನಗರ: ನಗರದ 1ನೇ ವಾರ್ಡಿನ ಸಿಂಗ್ರಬೋವಿ ದೊಡ್ಡಿಯಲ್ಲಿ ಭಾನುವಾರ ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್ ಮಾತನಾಡಿ 'ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶದ ಮೇರೆಗೆ ಪಕ್ಷದ ವತಿಯಿಂದ ರಾಜ್ಯದಾದ್ಯಂತ ಆರೋಗ್ಯ ಹಸ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಸರ್ಕಾರ ಮಾಡಬೇಕಾದ ಕೆಲಸವನ್ನು ಕಾಂಗ್ರೆಸ್ ಮಾಡುತ್ತದೆ. ಪ್ರತಿ ಮನೆ ಮನೆಗೆ ಪಕ್ಷದ ಕಾರ್ಯಕರ್ತರು ತಲುಪಿ ಪ್ರತಿಯೊಬ್ಬರ ದೇಹದ ಉಷ್ಣಾಂಶ ಸೇರಿದಂತೆ ಇತರೆ ಆರೋಗ್ಯ ತಪಾಸಣೆ ಮಾಡಲಿದ್ದಾರೆ ಎಂದು ಹೇಳಿದರು.

ADVERTISEMENT

ಆರೋಗ್ಯ ತಪಾಸಣೆ ವೇಳೆ ಪ್ರತಿಯೊಬ್ಬರಿಗೂ ಮಾಸ್ಕ್, ಸ್ಯಾನಿಟೈಸರ್‌ ಹಾಗೂ ದೇಹದಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಸುವ ಮಾತ್ರೆಗಳನ್ನು ವಿತರಣೆ ಮಾಡಲಾಗುತ್ತಿದೆ. ತಪಾಸಣೆಯಲ್ಲಿ ಸಾರ್ವಜನಿಕರ ಆರೋಗ್ಯದಲ್ಲಿ ಏರುಪೇರಾಗಿರುವುದು ಕಂಡು ಬಂದಲ್ಲಿ ನೇರವಾಗಿ ವೈದ್ಯರಿಗೆ ಮಾಹಿತಿ ಕೊಡಲಾಗುತ್ತಿದೆ. ಈ ಕಾರ್ಯಕ್ಕಾಗಿಯೇ ಪಕ್ಷದ ವತಿಯಿಂದ ಮೂವರು ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಆರೋಗ್ಯ ತಪಾಸಣೆ ಸಂದರ್ಭ ಕೆಲವರಲ್ಲಿ ದೇಶಹದ ಉಷ್ಣಾಂಶ 100 ಡಿಗ್ರಿ ಸೆಲ್ಸಿಯಸ್‌ ದಾಟಿದೆ. ಈ ಮಾಹಿತಿಯನ್ನು ವೈದ್ಯರಿಗೆ ನೀಡಿದ್ದೇವೆ. ಅತೀ ಹೆಚ್ಚು ಬಳಲಿಕೆ ಕಂಡು ಬಂದಲ್ಲಿ, ಅಂತಹವರ ಮಾಹಿತಿಯನ್ನು ಜಿಲ್ಲಾ ಆರೋಗ್ಯಾಧಿಕಾರಿ ಅಥವಾ ತಾಲೂಕು ಆರೋಗ್ಯಾಧಿಕಾರಿಗೆ ಮಾಹಿತಿ ನೀಡಲಿದ್ದೇವೆ ಎಂದು ಹೇಳಿದರು.

ಒಂದನೇ ವಾರ್ಡಿನ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.