ADVERTISEMENT

ಕಲ್ಲಹಳ್ಳಿ ದೇವಾಲಯದಲ್ಲಿ ಆಷಾಢ ಪೂಜೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2019, 14:05 IST
Last Updated 3 ಆಗಸ್ಟ್ 2019, 14:05 IST
ಕಲ್ಲಹಳ್ಳಿ ಶ್ರೀನಿವಾಸ ದೇವಾಲಯದಲ್ಲಿ ಶ್ರಾವಣ ಮಾಸದ ಪೂಜೆ ನಡೆಯಿತು
ಕಲ್ಲಹಳ್ಳಿ ಶ್ರೀನಿವಾಸ ದೇವಾಲಯದಲ್ಲಿ ಶ್ರಾವಣ ಮಾಸದ ಪೂಜೆ ನಡೆಯಿತು   

ಕನಕಪುರ: ಇಲ್ಲಿನ ಧಾರ್ಮಿಕ ಪ್ರಸಿದ್ಧ ಚಿಕ್ಕತಿರುಪತಿ ಎಂದೇ ಹೆಸರಾಗಿರುವ ಶ್ರೀ ಕಲ್ಲಹಳ್ಳಿ ಶ್ರೀನಿವಾಸನ ದೇವಾಲಯದಲ್ಲಿ ಆಷಾಢ ಮಾಸದ ಮೊದಲನೇ ಶ್ರಾವಣ ಶನಿವಾರದ ಪೂಜಾ ಕಾರ್ಯ ವಿಜೃಂಭಣೆಯಿಂದ ನೆರವೇರಿತು.

ಶನಿವಾರ ದೇವಸ್ಥಾನದಲ್ಲಿ ಶ್ರೀನಿವಾಸಮೂರ್ತಿಗೆ ಫಲಪುಷ್ಪ, ಚಿನ್ನಾಭರಣಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.

ಬೆಳಿಗ್ಗೆ 6 ಗಂಟೆಯಿಂದಲೇ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಸಲಾಗಿತ್ತು. ರಾತ್ರಿ 8.30ರ ವರೆಗೂ ಭಕ್ತರು ದೇವರ ದರ್ಶನ ಪಡೆದರು. ದೇವಾಲಯ ಪ್ರಸಾದ ವಿನಿಯೋಗ ಸಮಿತಿ ವತಿಯಿಂದಭಕ್ತರಿಗೆ ಪ್ರಸಾದ ವಿತರಿಸಲಾಯಿತು.

ADVERTISEMENT

ತಾಲ್ಲೂಕಿನ ನಾನಾ ಭಾಗಗಳಿಂದ ಹಾಗೂ ಬೆಂಗಳೂರಿನಿಂದ ಹೆಚ್ಚಿನ ಭಕ್ತರು ಶ್ರೀನಿವಾಸನ ದರ್ಶನಕ್ಕೆ ಬಂದಿದ್ದರು. ಸುಮಾರು 6 ಸಾವಿರದಷ್ಟು ಭಕ್ತರು ದೇವರ ದರ್ಶನ ಮಾಡಿದ್ದಾರೆ, ಪ್ರಸಾದದ ವ್ಯವಸ್ಥೆಯನ್ನು ಭಕ್ತರ ಸಹಕಾರದಿಂದಲೇ ಮಾಡಲಾಗಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.