ಕನಕಪುರ: ಇಲ್ಲಿನ ಧಾರ್ಮಿಕ ಪ್ರಸಿದ್ಧ ಚಿಕ್ಕತಿರುಪತಿ ಎಂದೇ ಹೆಸರಾಗಿರುವ ಶ್ರೀ ಕಲ್ಲಹಳ್ಳಿ ಶ್ರೀನಿವಾಸನ ದೇವಾಲಯದಲ್ಲಿ ಆಷಾಢ ಮಾಸದ ಮೊದಲನೇ ಶ್ರಾವಣ ಶನಿವಾರದ ಪೂಜಾ ಕಾರ್ಯ ವಿಜೃಂಭಣೆಯಿಂದ ನೆರವೇರಿತು.
ಶನಿವಾರ ದೇವಸ್ಥಾನದಲ್ಲಿ ಶ್ರೀನಿವಾಸಮೂರ್ತಿಗೆ ಫಲಪುಷ್ಪ, ಚಿನ್ನಾಭರಣಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.
ಬೆಳಿಗ್ಗೆ 6 ಗಂಟೆಯಿಂದಲೇ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಸಲಾಗಿತ್ತು. ರಾತ್ರಿ 8.30ರ ವರೆಗೂ ಭಕ್ತರು ದೇವರ ದರ್ಶನ ಪಡೆದರು. ದೇವಾಲಯ ಪ್ರಸಾದ ವಿನಿಯೋಗ ಸಮಿತಿ ವತಿಯಿಂದಭಕ್ತರಿಗೆ ಪ್ರಸಾದ ವಿತರಿಸಲಾಯಿತು.
ತಾಲ್ಲೂಕಿನ ನಾನಾ ಭಾಗಗಳಿಂದ ಹಾಗೂ ಬೆಂಗಳೂರಿನಿಂದ ಹೆಚ್ಚಿನ ಭಕ್ತರು ಶ್ರೀನಿವಾಸನ ದರ್ಶನಕ್ಕೆ ಬಂದಿದ್ದರು. ಸುಮಾರು 6 ಸಾವಿರದಷ್ಟು ಭಕ್ತರು ದೇವರ ದರ್ಶನ ಮಾಡಿದ್ದಾರೆ, ಪ್ರಸಾದದ ವ್ಯವಸ್ಥೆಯನ್ನು ಭಕ್ತರ ಸಹಕಾರದಿಂದಲೇ ಮಾಡಲಾಗಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.