ADVERTISEMENT

ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 1 ಜೂನ್ 2021, 3:33 IST
Last Updated 1 ಜೂನ್ 2021, 3:33 IST
ಬಂಧಿತ ಆರೋಪಿ ರಾಮಕೃಷ್ಣ
ಬಂಧಿತ ಆರೋಪಿ ರಾಮಕೃಷ್ಣ   

ಕನಕಪುರ: ತಾಲ್ಲೂಕಿನ ಕಣಿವೆ ಮಾದಾಪುರ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದ ಆರೋಪಿ ರಾಮಕೃಷ್ಣನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕೊರೊನಾ ಕರ್ತವ್ಯ ಮಾಡುವ ವೇಳೆ ರಾಮಕೃಷ್ಣ ಮತ್ತು ಅವರ ಕುಟುಂಬದವರು ತಮ್ಮ ಮೇಲೆ ಹಲ್ಲೆ ನಡೆಸಿ, ಜಾತಿನಿಂದನೆ ಮಾಡಿ ತಮ್ಮನ್ನು ಅವಮಾನಿಸಿದಲ್ಲದೆ ಕೊಲೆ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿ ಅಂಗನವಾಡಿ ಕಾರ್ಯಕರ್ತೆ ನಿರ್ಮಲ ಹಾರೋಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ದೂರಿನನ್ವಯ ಹಾರೋಹಳ್ಳಿ ಪೊಲೀಸ್‌ ಠಾಣೆಯಲ್ಲಿ ಕೊಲೆ ಬೆದರಿಕೆ, ಹಲ್ಲೆ, ಜಾತಿನಿಂದನೆ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ಡಿವೈಎಸ್‌ಪಿ ಮೋಹನ್‌ಕುಮಾರ್‌ ಪೊಲೀಸ್‌ ವರಿಷ್ಠಾಧಿಕಾರಿ ಗಿರೀಶ್‌ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆಯಲ್ಲಿ ಜಿಗಣಿ ಹೋಬಳಿಯ ರಾಗಿಹಳ್ಳಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ADVERTISEMENT

ಸಬ್‌ ಇನ್‌ಸ್ಪೆಕ್ಟರ್‌ ಟಿ.ಮುರಳಿ, ಸಿಬ್ಬಂದಿ ಬೋರೇಗೌಡ, ಸತೀಶ್‌ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.