ADVERTISEMENT

ಹಾಲಿನ ತಾಜಾತನ ಕಾಪಾಡಲು ಬಿಎಂಸಿ ಕೇಂದ್ರಗಳ ಸ್ಥಾಪನೆ: ಡಿ.ಕೆ.ಸುರೇಶ್

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 2:41 IST
Last Updated 25 ಫೆಬ್ರುವರಿ 2026, 2:41 IST
ಚನ್ನಪಟ್ಟಣ ತಾಲ್ಲೂಕಿನ ಭೂಹಳ್ಳಿ ಗ್ರಾಮದಲ್ಲಿ ಬಮೂಲ್ ವತಿಯಿಂದ ನಿರ್ಮಾಣವಾಗಿರುವ 5 ಸಾವಿರ ಲೀಟರ್ ಸಾಮರ್ಥ್ಯದ ಬಿಎಂಸಿ ಕೇಂದ್ರವನ್ನು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಉದ್ಘಾಟಿಸಿದರು. ಶಾಸಕ ಸಿ.ಪಿ.ಯೋಗೇಶ್ವರ್, ಬಮೂಲ್ ನಿರ್ದೇಶಕ ಎಸ್.ಲಿಂಗೇಶ್ ಕುಮಾರ್, ಇತರರು ಹಾಜರಿದ್ದರು
ಚನ್ನಪಟ್ಟಣ ತಾಲ್ಲೂಕಿನ ಭೂಹಳ್ಳಿ ಗ್ರಾಮದಲ್ಲಿ ಬಮೂಲ್ ವತಿಯಿಂದ ನಿರ್ಮಾಣವಾಗಿರುವ 5 ಸಾವಿರ ಲೀಟರ್ ಸಾಮರ್ಥ್ಯದ ಬಿಎಂಸಿ ಕೇಂದ್ರವನ್ನು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಉದ್ಘಾಟಿಸಿದರು. ಶಾಸಕ ಸಿ.ಪಿ.ಯೋಗೇಶ್ವರ್, ಬಮೂಲ್ ನಿರ್ದೇಶಕ ಎಸ್.ಲಿಂಗೇಶ್ ಕುಮಾರ್, ಇತರರು ಹಾಜರಿದ್ದರು   

ಚನ್ನಪಟ್ಟಣ: ತಾಲ್ಲೂಕಿನ ಭೂಹಳ್ಳಿ, ಬಾಣಗಹಳ್ಳಿ, ನಿಡಗೋಡಿ, ಬೊಮ್ಮನಾಯಕನಹಳ್ಳಿ ಮತ್ತು ಗುಡ್ಡೆತಿಮ್ಮಸಂದ್ರ ಗ್ರಾಮಗಳಲ್ಲಿ ಮಂಗಳವಾರ ಬಮೂಲ್ ವತಿಯಿಂದ 5 ಸಾವಿರ ಲೀಟರ್ ಸಾಮರ್ಥ್ಯದ ಬಿಎಂಸಿ (ಬಲ್ಕ್ ಮಿಲ್ಕ್ ಕೂಲಿಂಗ್) ಕೇಂದ್ರಗಳನ್ನು ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್, ಆಧುನಿಕ ಡೇರಿ ಉದ್ಯಮದಲ್ಲಿ ಹಾಲಿನ ತಾಜಾತನ ಮತ್ತು ಗುಣಮಟ್ಟ ಕಾಪಾಡುವುದು ಅತ್ಯಗತ್ಯ. ಹಾಲು ಬೇಗನೆ ಹಾಳಾಗುವ ಸಾಧ್ಯತೆ ಇರುವುದರಿಂದ ಸರಿಯಾದ ತಾಪಮಾನದಲ್ಲಿ ಸಂಗ್ರಹಿಸಬೇಕು. ಈ ನಿಟ್ಟಿನಲ್ಲಿ ಬಮೂಲ್ ವ್ಯಾಪ್ತಿಯಲ್ಲಿ 5 ಸಾವಿರ ಲೀಟರ್ ಸಾಮರ್ಥ್ಯದ ಬಿಎಂಸಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.

ಬಿಎಂಸಿ ಕೇಂದ್ರಗಳಲ್ಲಿ ಹಾಲನ್ನು ಚಿಲ್ಲಿಂಗ್ ಮಾಡಿ, ಹಾಲಿನ ಉತ್ಪನ್ನಗಳ ತಯಾರಿಕೆಗೆ ಸರಬರಾಜು ಮಾಡಲಾಗುತ್ತದೆ. ಬಮೂಲ್ ವ್ಯಾಪ್ತಿಯಲ್ಲಿ ಈಗಾಗಲೇ 151 ಬಿಎಂಸಿ ಕೇಂದ್ರಗಳಿವೆ. ಚನ್ನಪಟ್ಟಣದ 20 ಗ್ರಾಮಗಳಲ್ಲಿ ಬಿಎಂಸಿ ಕೇಂದ್ರಗಳು ಸ್ಥಾಪನೆಯಾಗಿವೆ. ಇದೀಗ 5 ಹೊಸ ಕೇಂದ್ರಗಳು ಸೇರ್ಪಡೆಯಾಗಿವೆ ಎಂದು ಹೇಳಿದರು.

ADVERTISEMENT

ರೈತರಿಗೆ ಪ್ರೋತ್ಸಾಹಧನ: ಹೈನುಗಾರಿಕೆಯಲ್ಲಿ ತೊಡಗಿರುವ ರೈತರ ಹಿತ ಕಾಪಾಡಲು ಬಮೂಲ್ ಬದ್ಧವಾಗಿದೆ. ರೈತರು ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಅಗತ್ಯ ಪ್ರೋತ್ಸಾಹ ನೀಡಲಾಗುವುದು. ರೈತರು ಮತ್ತು ಗ್ರಾಹಕರ ಹಿತ ಕಾಪಾಡುವುದೇ ಬಮೂಲ್ ಧ್ಯೇಯವಾಗಿದೆ. ರಾಜ್ಯ ಸರ್ಕಾರ ರೈತರು ಉತ್ಪಾದಿಸುವ ಪ್ರತಿ ಲೀಟರ್ ಹಾಲಿಗೆ ₹5 ಪ್ರೋತ್ಸಾಹಧನ ನೀಡುತ್ತಿದೆ. ದೇಶದ ಬೇರೆ ಯಾವ ರಾಜ್ಯದಲ್ಲೂ ಇಂತಹ ಪ್ರೋತ್ಸಾಹವಿಲ್ಲ ಎಂದು ಸುರೇಶ್ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕ ಸಿ.ಪಿ.ಯೋಗೇಶ್ವರ್ ಮಾತನಾಡಿ, ರಾಜ್ಯದಲ್ಲೇ ಹಾಲು ಉತ್ಪಾದನೆಯಲ್ಲಿ ಚನ್ನಪಟ್ಟಣ ತಾಲ್ಲೂಕು ಮೊದಲ ಸ್ಥಾನದಲ್ಲಿದೆ. ಹೈನುಗಾರಿಕೆಗೆ ಇಲ್ಲಿ ಉತ್ತಮ ವಾತಾವರಣವಿದೆ. ರೈತರು ಹೆಚ್ಚಿನ ಪ್ರಮಾಣದಲ್ಲಿ ಹಾಲು ಉತ್ಪಾದಿಸುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಬಮೂಲ್ ನಿರ್ದೇಶಕ ಎಸ್.ಲಿಂಗೇಶ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್. ಗಂಗಾಧರ್, ನಗರಸಭೆ ಅಧ್ಯಕ್ಷ ನಾಗೇಶ್, ಮುಖಂಡರಾದ ವಾಸಿಲ್ ಅಲಿಖಾನ್, ಪುಟ್ಟರಾಜು, ಕೆ.ಟಿ. ಲಕ್ಷ್ಮಮ್ಮ, ಬಮೂಲ್ ಶಿಬಿರ ವ್ಯವಸ್ಥಾಪಕರಾದ ಡಾ.ಶ್ರೀಧರ್, ಕಿರಣ್, ವಿಸ್ತರಣಾಧಿಕಾರಿಗಳಾದ ಹೊನ್ನಪ್ಪ ಪೂಜಾರಿ, ರಾಜು, ಆನಂದ್, ಕೃಷಿ ಅಧಿಕಾರಿ ಜಿತೇಂದ್ರ, ಎಂಪಿಸಿಎಸ್ ಅಧ್ಯಕ್ಷ, ಸದಸ್ಯರು ಮತ್ತು ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

ಚನ್ನಪಟ್ಟಣ: ಆಧುನಿಕ ಡೈರಿ ಉದ್ಯಮದಲ್ಲಿ ಹಾಲಿನ ತಾಜಾತನ ಮತ್ತು ಗುಣಮಟ್ಟವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿರುವ ಕಾರಣ ಬಮೂಲ್ ವ್ಯಾಪ್ತಿಯಲ್ಲಿ 5 ಸಾವಿರ ಲೀಟರ್ ಸಾಮಾರ್ಥ್ಯದ ಬಿಎಂಸಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದರು.
ತಾಲ್ಲೂಕಿನ ಭೂಹಳ್ಳಿ, ಬಾಣಗಹಳ್ಳಿ, ನಿಡಗೋಡಿ, ಬೊಮ್ಮನಾಯಕನಹಳ್ಳಿ, ಗುಡ್ಡೆತಿಮ್ಮಸಂದ್ರ ಗ್ರಾಮಗಳಲ್ಲಿ ಮಂಗಳವಾರ ಬಮೂಲ್ ವತಿಯಿಂದ ನಿರ್ಮಾಣವಾಗಿರುವ 5 ಸಾವಿರ ಲೀಟರ್ ಸಾಮರ್ಥ್ಯದ ಬಿಎಂಸಿ ಕೇಂದ್ರಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಹಾಲು ಬೇಗನೆ ಹಾಳಾಗುವುದರಿಂದ ಸರಿಯಾದ ತಾಪಮಾನದಲ್ಲಿ ಹಾಲನ್ನು ಸಂಗ್ರಹಿಸಬೇಕು. ಸಂಘಕ್ಕೆ ಬರುವ ಹಾಲನ್ನು ಬಿಎಂಸಿ ಕೇಂದ್ರಗಳಲ್ಲಿ ಚಿಲ್ಲಿಂಗ್ ಮಾಡಿ ಹಾಲಿನ ಉತ್ಪನ್ನಗಳ ತಯಾರಿಕೆಗೆ ಈ ಹಾಲನ್ನು ಸರಬರಾಜು ಮಾಡುತ್ತೇವೆ. ಹಾಗಾಗಿ ಬಮೂಲ್ ವ್ಯಾಪ್ತಿಯಲ್ಲಿ ಬಿಎಂಸಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಬಮೂಲ್ ವ್ಯಾಪ್ತಿಯಲ್ಲಿ ಈಗಾಗಲೇ ಸುಮಾರು 151 ಬಿಎಂಸಿ ಕೇಂದ್ರಗಳಿವೆ. ಚನ್ನಪಟ್ಟಣದಲ್ಲಿ 20 ಗ್ರಾಮಗಳಲ್ಲಿ ಬಿಎಂಸಿ ಕೇಂದ್ರಗಳು ಸ್ಥಾಪನೆಯಾಗಿವೆ. ಇಂದು ತಾಲ್ಲೂಕಿನ 5 ಗ್ರಾಮಗಳಲ್ಲಿ ಬಿಎಂಸಿ ಕೇಂದ್ರಗಳನ್ನು ಉದ್ಘಾಟನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಹೈನುಗಾರಿಕೆಯಲ್ಲಿ ತೊಡಗಿರುವ ರೈತರ ಹಿತವನ್ನು ಕಾಪಾಡಲು ಬಮೂಲ್ ಬದ್ಧವಾಗಿದ್ದು, ರೈತರು ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಅಗತ್ಯ ಪ್ರೋತ್ಸಾಹವನ್ನು ನೀಡಲಾಗುವುದು. ರೈತರ, ಗ್ರಾಹಕರ ಹಿತ ಕಾಪಾಡುವುದೇ ಬಮೂಲ್ ನ ಧ್ಯೇಯವಾಗಿದೆ. ಇಡೀ ದೇಶದಲ್ಲಿ ಹಾಲಿಗೆ ರೂ. 5 ಪ್ರೋತ್ಸಾಹಧನವನ್ನು ಯಾವ ರಾಜ್ಯಗಳು ನೀಡುವುದಿಲ್ಲ. ರೈತರ ಹೈನೋದ್ಯಮಕ್ಕೆ ಪ್ರೋತ್ಸಾಹ ನೀಡಬೇಕು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ರೈತರು ಉತ್ಪಾದಿಸುವ ಪ್ರತಿ ಲೀಟರ್ ಹಾಲಿಗೆ ರೂ. 5 ಪ್ರೋತ್ಸಾಹಧನವನ್ನು ನೀಡುತ್ತಿದೆ ಎಂದು ತಿಳಿಸಿದರು.
ಶಾಸಕ ಸಿ.ಪಿ.ಯೋಗೇಶ್ವರ್ ಮಾತನಾಡಿ, ಇಡೀ ರಾಜ್ಯದಲ್ಲೇ ಹಾಲು ಉತ್ಪಾದನೆಯಲ್ಲಿ ತಾಲ್ಲೂಕು ಮೊದಲನೆ ಸ್ಥಾನದಲ್ಲಿದೆ. ಹೈನುಗಾರಿಕೆಗೆ ಇಲ್ಲಿ ಉತ್ತಮವಾದ ವಾತಾವರಣ ಇದೆ. ರೈತರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಹಾಲು ಉತ್ಪಾದನೆ ಮಾಡುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಕಿವಿಮಾತು ಹೇಳಿದರು.


ಬಮೂಲ್ ನಿರ್ದೇಶಕ ಎಸ್.ಲಿಂಗೇಶ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಗಂಗಾಧರ್, ನಗರಸಭೆ ಅಧ್ಯಕ್ಷ ನಾಗೇಶ್, ಮುಖಂಡರಾದ ವಾಸಿಲ್ ಅಲಿಖಾನ್, ಪುಟ್ಟರಾಜು, ಕೆ.ಟಿ.ಲಕ್ಷ್ಮಮ್ಮ, ಬಮೂಲ್ ಶಿಬಿರ ವ್ಯವಸ್ಥಾಪಕರಾದ ಡಾ.ಶ್ರೀಧರ್, ಕಿರಣ್, ವಿಸ್ತರಣಾಧಿಕಾರಿಗಳಾದ ಹೊನ್ನಪ್ಪ ಪೂಜಾರಿ, ರಾಜು, ಆನಂದ್, ಕೃಷಿ ಅಧಿಕಾರಿ ಜಿತೇಂದ್ರ, ಎಂಪಿಸಿಎಸ್ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.