ADVERTISEMENT

ಬಂದ್‌ ಅನವಶ್ಯಕ: ಎಚ್.ಡಿ.ಕುಮಾರಸ್ವಾಮಿ

ಮರಾಠ ಅಭಿವೃದ್ಧಿ ನಿಗಮದ ವಿಚಾರ ರಾಜಕೀಯ ಪ್ರೇರಿತ: ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2020, 1:25 IST
Last Updated 21 ನವೆಂಬರ್ 2020, 1:25 IST
ಚನ್ನಪಟ್ಟಣ ತಾಲ್ಲೂಕಿನ ಪೌಳಿದೊಡ್ಡಿ ಗ್ರಾಮದಲ್ಲಿ ಕುಮಾರಸ್ವಾಮಿ ಎಂಪಿಸಿಎಸ್ ನೂತನ ಕಟ್ಟಡ ಉದ್ಘಾಟಿಸಿದರು
ಚನ್ನಪಟ್ಟಣ ತಾಲ್ಲೂಕಿನ ಪೌಳಿದೊಡ್ಡಿ ಗ್ರಾಮದಲ್ಲಿ ಕುಮಾರಸ್ವಾಮಿ ಎಂಪಿಸಿಎಸ್ ನೂತನ ಕಟ್ಟಡ ಉದ್ಘಾಟಿಸಿದರು   

ಚನ್ನಪಟ್ಟಣ: ಮರಾಠ ಅಭಿವೃದ್ಧಿ ನಿಗಮದ ವಿಚಾರದಲ್ಲಿ ಕರ್ನಾಟಕ ಬಂದ್ ಮಾಡುವ ಅವಶ್ಯ ಇಲ್ಲ ಎಂದು ಶಾಸಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

‘ಕೇವಲ ಎರಡು ಮೂರು ಜಿಲ್ಲೆಗಳಲ್ಲಿ ಮಹಾರಾಷ್ಟ್ರದವರು ಕ್ಯಾತೆ ತೆಗೆಯುತ್ತಿದ್ದಾರೆ. ಅಲ್ಲಿ ವಾಸವಿರುವ ಮರಾಠಿಗರು ಕನ್ನಡದ ವಿರುದ್ಧವಿದ್ದಾರೆ. ಆದರೆ, ಇಡೀ ರಾಜ್ಯದಲ್ಲಿ ಮರಾಠಿ ಭಾಷಿಕರು ವಿವಿಧ ಉದ್ಯೋಗಗಳಲ್ಲಿ ತೊಡಗಿಸಿಕೊಂಡು ತಮ್ಮ ಜೀವನ ರೂಪಿಸಿಕೊಂಡಿದ್ದಾರೆ. ಅವರು ನಮ್ಮಲ್ಲಿಯೇ ಬೆರೆತು ಹೋಗಿದ್ದಾರೆ. ಕೇವಲ ಕೆಲವರು ಮಾತ್ರ ಕನ್ನಡ ವಿರೋಧಿಸುತ್ತಾರೆ ಎಂದರೆ ಎಲ್ಲರೂ ವಿರೋಧಿಗಳಲ್ಲ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಸರ್ಕಾರ ಮತ ಪಡೆಯುವ ಸಲುವಾಗಿ ಯಾವುದೇ ಇಂತಹ ಅನವಶ್ಯ ನಿರ್ಧಾರ ತೆಗೆದುಕೊಳ್ಳಬಾರದು. ಭಾಷಿಕರ ಮಧ್ಯೆ ವಿಷಬೀಜ ಬಿತ್ತಬಾರದು’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.