ADVERTISEMENT

ಬಿಡದಿ: ಸೋಂಕು ತಡೆಗೆ ಬಂದೋಬಸ್ತ್

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2021, 4:49 IST
Last Updated 30 ಏಪ್ರಿಲ್ 2021, 4:49 IST
ಮಾನವ ಹಕ್ಕು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಪದಾಧಿಕಾರಿಗಳು
ಮಾನವ ಹಕ್ಕು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಪದಾಧಿಕಾರಿಗಳು   

ಬಿಡದಿ: ಸದಾ ಜನಜಂಗುಳಿಯಿಂದ ಗಿಜಿಗುಡುತ್ತಿದ್ದ ಪಟ್ಟಣ ಲಾಕ್‌ಡೌನ್‌ ಪರಿಣಾಮ ನಿಶ್ಯಬ್ದಗೊಂಡಿದೆ.

ಎಲ್ಲಾ ವರ್ತಕರು ಅಂಗಡಿಗಳನ್ನು ಬಂದ್‌ ಮಾಡಿದ್ದಾರೆ. ಜನಸಾಮಾನ್ಯರು ಮನೆಯಿಂದ ಹೊರಗಡೆ ಸುಳಿಯುತ್ತಿಲ್ಲ. ಬೆಳಿಗ್ಗೆ 6ಗಂಟೆಯಿಂದ 10ಗಂಟೆವರೆಗೆ ಮಾತ್ರವೇ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಅವಧಿಯಲ್ಲಿ ಜನರು ಮನೆಯಿಂದ ಹೊರಬಂದು ತರಕಾರಿ ಸೇರಿದಂತೆ ಆಹಾರ ಪದಾರ್ಥ ಖರೀದಿಸುತ್ತಿದ್ದಾರೆ.

ಸರ್ಕಾರದ ಆದೇಶ ಪಾಲಿಸುತ್ತಾ ಜನರು ಮನೆಯಲ್ಲೇ ಇರಬೇಕಿದೆ. ಪಟ್ಟಣದ ಎಲ್ಲಾ ಮುಖ್ಯ ರಸ್ತೆಗಳಲ್ಲಿಯೂ ಪೊಲೀಸರು ಬ್ಯಾರಿಗೇಡ್ ಅಳವಡಿಸಿದ್ದಾರೆ. ಅನಾವಶ್ಯಕವಾಗಿ ಹೊರಗೆ ಬಾರದಂತೆ ನಾಗರಿಕರಿಗೆ ತಿಳಿವಳಿಕೆ ನೀಡುತ್ತಿದ್ದರು. ಮಾಸ್ಕ್ ಇಲ್ಲದೇ ಸಂಚರಿಸುವವರಿಗೆ ದಂಡ ವಿಧಿಸಿದರು. ಜೊತೆಗೆ, ಅನಗತ್ಯವಾಗಿ ಸಂಚರಿಸುವ ವಾಹನಗಳ ಸವಾರರಿಗೂದಂಡ ವಿಧಿಸಿ ಎಚ್ಚರಿಕೆನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.