ADVERTISEMENT

ಕನಕಪುರ: ಬರಡನಹಳ್ಳಿ ಮಾರಮ್ಮ ಅಗ್ನಿಕೊಂಡೋತ್ಸವ

​ಪ್ರಜಾವಾಣಿ ವಾರ್ತೆ
Published 3 ಮೇ 2024, 5:57 IST
Last Updated 3 ಮೇ 2024, 5:57 IST
ಕನಕಪುರ ಬರಡನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದ ಮಾರಮ್ಮ ದೇವಿಯ ಕೊಂಡೋತ್ಸವದಲ್ಲಿ ಮಹಿಳೆಯರು ತಂಬಿಟ್ಟಿನ ಆರತಿಯೊಂದಿಗೆ ಪಾಲ್ಗೊಂಡಿರುವುದು
ಕನಕಪುರ ಬರಡನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದ ಮಾರಮ್ಮ ದೇವಿಯ ಕೊಂಡೋತ್ಸವದಲ್ಲಿ ಮಹಿಳೆಯರು ತಂಬಿಟ್ಟಿನ ಆರತಿಯೊಂದಿಗೆ ಪಾಲ್ಗೊಂಡಿರುವುದು   

ಕನಕಪುರ: ಕಸಬಾ ಹೋಬಳಿ ಬರಡನಹಳ್ಳಿ ಗ್ರಾಮದಲ್ಲಿ ಮಾರಮ್ಮ ಅಗ್ನಿಕೊಂಡೋತ್ಸವವು ಬುಧವಾರ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ಯಶಸ್ವಿಯಾಗಿ ನಡೆಯಿತು.

ಮಂಗಳವಾರ ರಾತ್ರಿ ನಡೆದ ಎಳವಾರ ಕಾರ್ಯಕ್ರಮದಲ್ಲಿ ಸೌದೆಯನ್ನು ಕೊಂಡದಲ್ಲಿ ಹಾಕಿ ಅಗ್ನಿಪೂಜೆ ನೆರವೇರಿಸಿ ಕೆಂಡವನ್ನಾಗಿ ಮಾಡಲಾಯಿತು. ಬುಧವಾರ ಬೆಳಿಗ್ಗೆ ಗ್ರಾಮದ ಜನರು ಚಿಕ್ಕಹೊಳೆಯಲ್ಲಿ ಗಂಗಾಪೂಜೆಯನ್ನು ನೆರವೇರಿಸಿ, ಮೆರವಣಿಗೆಯಲ್ಲಿ ದೇವರ ಮೂರ್ತಿಯನ್ನು ಕರೆತಂದರು. ಗ್ರಾಮದ ಮಹಿಳೆಯರು ತಂಬಿಟ್ಟಿನ ಆರತಿಯನ್ನು ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡರು.

ದೇವಾಲಯದ ಅರ್ಚಕ ಮಾರಮ್ಮನ ಗಿಂಡಿಯನ್ನು ಹೊತ್ತು ಯಶಸ್ವಿಯಾಗಿ ಅಗ್ನಿಕೊಂಡವನ್ನು ಹಾಯ್ದರು. ಬುಧವಾರ ರಾತ್ರಿ ಗ್ರಾಮದಲ್ಲಿ ದೇವರ ಮೆರವಣಿಗೆ ಉತ್ಸವ ಕಾರ್ಯಕ್ರಮ ನಡೆಯಿತು. ದೇವರಿಗೆ ಮನೆ ಮುಂದೆ ಆರತಿ ನೀಡಿ ಪೂಜೆ ಸಲ್ಲಿಸಿದರು.

ADVERTISEMENT
ಬರಡನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದ ಮಾರಮ್ಮ ದೇವಿಯ ಕೊಂಡೋತ್ಸವದಲ್ಲಿ ಅರ್ಚಕ ವೀರಭದ್ರ ಅವರು ಮಾರಮ್ಮನ ಗಿಂಡಿಯನ್ನು ಹೊತ್ತು ಮೆರವಣಿಗೆಯಲ್ಲಿ ಹೋಗುತ್ತಿರುವುದು
ಬರಡನಹಳ್ಳಿ ಗ್ರಾಮದಲ್ಲಿ ಬುಧವಾರ ಅರ್ಚಕ ವೀರಭದ್ರ ಅಗ್ನಿಕೊಂಡವನ್ನು ಯಶಸ್ವಿಯಾಗಿ ಆಯುವುದನ್ನು ಸಾವಿರಾರು ಜನರು ವೀಕ್ಷಣೆ ಮಾಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.