ADVERTISEMENT

3ರಂದು ಬಸವ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 1 ಮೇ 2022, 6:06 IST
Last Updated 1 ಮೇ 2022, 6:06 IST
ಬಿಡದಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಲೇರಿಯಾ ಜಾಗೃತಿ ಕರಪತ್ರಗಳನ್ನು ಟಿಎಚ್‌ಒ ಶಶಿಕಲಾ ಬಿಡುಗಡೆ ಮಾಡಿದರು. ಬಿ.ಎಸ್‌. ಗಂಗಾಧರ್, ಸೌಮ್ಯಾ, ರಮೇಶ್‌, ಡಾ.ರಾಘವೇಂದ್ರ, ಡಾ.ನಳಿನಿ, ಡಾ.ಅರ್ಚನಾ, ಪದ್ಮರೇಖಾ ಇದ್ದರು
ಬಿಡದಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಲೇರಿಯಾ ಜಾಗೃತಿ ಕರಪತ್ರಗಳನ್ನು ಟಿಎಚ್‌ಒ ಶಶಿಕಲಾ ಬಿಡುಗಡೆ ಮಾಡಿದರು. ಬಿ.ಎಸ್‌. ಗಂಗಾಧರ್, ಸೌಮ್ಯಾ, ರಮೇಶ್‌, ಡಾ.ರಾಘವೇಂದ್ರ, ಡಾ.ನಳಿನಿ, ಡಾ.ಅರ್ಚನಾ, ಪದ್ಮರೇಖಾ ಇದ್ದರು   

ರಾಮನಗರ: ಜಗಜ್ಯೋತಿ ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಮೇ 3ರಂದು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ‘ಕಳೆದ ಎರಡು ವರ್ಷ ಕೋವಿಡ್ ಕಾರಣಕ್ಕೆ ಸರಳವಾಗಿ ಬಸವ ಜಯಂತಿಯನ್ನು ಆಚರಿಸಲಾಗಿತ್ತು, ಈ ಬಾರಿ ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿಯೇ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜಿಸಲಾಗುವುದು’ ಎಂದರು.

ಬಸವಣ್ಣನವರ ವಚನಗಳ ಮಹತ್ವ ಯುವ ಸಮುದಾಯ ಸೇರಿದಂತೆ ಮುಂದಿನ ಪೀಳಿಗೆಗೆ ತಲುಪಬೇಕು. ವಚನಗಳ ಮಹತ್ವವನ್ನು ತಿಳಿಸಿಕೊಡುವ ಕೆಲಸ ಜಯಂತಿಯಂದು ಆಗಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು ಎಂದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ರಾಮನಗರ ತಹಶೀಲ್ದಾರ್ ಎಂ. ವಿಜಯ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಹರೀಶ್ ಕುಮಾರ್ ಎನ್. ಮತ್ತು ವೀರಶೈವ ಸಮಾಜದ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.