ರಾಮನಗರ: ಭಾರತ್ ಬಂದ್ ಬೆಂಬಲಿಸಿ ವಿವಿಧ ಸಂಘಟನೆಗಳು ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿದವು.
ರಾಮನಗರದ ಐಜೂರು ವೃತ್ತದಲ್ಲಿ ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ಕೆಲವು ಕಾಲ ಹೆದ್ದಾರಿ ತಡೆ ನಡೆಸಿದರು. ಈ ವೇಳೆ ಟೈರ್ ಗೆ ಬೆಂಕಿ ಹಚ್ಚಲು ನಿರಾಕರಿಸಿದ ಪೊಲೀಸರೊಂದಿಗೆ ಮಾಜಿ ಶಾಸಕ ಕೆ. ರಾಜು, ಕಿಸಾನ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಮಹೇಂದ್ರ ವಾಗ್ವಾದ ನಡೆಸಿದರು.
ಚನ್ನಪಟ್ಟಣದ ಕಾವೇರಿ ವೃತ್ತದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಅಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಎಂದಿನಂತೆ ಜನಜೀವನ: ಜನಸಾಮಾನ್ಯರ ಮೇಲೆ ಬಂದ್ ಪರಿಣಾಮ ಬೀರಿಲ್ಲ. ಮಾರುಕಟ್ಟೆಗಳು, ವಾಣಿಜ್ಯ ವಹಿವಾಟು, ಸಾರಿಗೆ ಸಂಚಾರ ಸಹಜ ಸ್ಥಿತಿಯಲ್ಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.