ADVERTISEMENT

ಸೋಲೂರು ದೇವಾಲಯದಲ್ಲಿ ಇಂದು ಭರತ ಹುಣ್ಣಿಮೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2020, 12:55 IST
Last Updated 8 ಫೆಬ್ರುವರಿ 2020, 12:55 IST

ಮಾಗಡಿ: ತಾಲ್ಲೂಕಿನ ಸೋಲೂರು ರೇಣುಕಾ ಯಲ್ಲಮ್ಮ ದೇವಾಲಯ ಟ್ರಸ್ಟಿನ ವತಿಯಿಂದ ಫೆ.9ರಂದು ಬೆಳಿಗ್ಗೆ 10 ಗಂಟೆಗೆ ಭರತ ಹುಣ್ಣಿಮೆ ಅಂಗವಾಗಿ ಜಾತ್ರೆ ನಡೆಯಲಿದೆ.

ಜಾತ್ರೆಯ ಅಂಗವಾಗಿ ರೇಣುಕಾ ಯಲ್ಲಮ್ಮ ದೇವಿಗೆ ವಿಶೇಷ ಅಲಂಕಾರ ಮಾಡಿ, ಪೂಜಿಸಿದ ನಂತರ ಮಠದ ಆವರಣದಲ್ಲಿ ವಿವಿಧ ಜನಪದ ಕಲಾ ತಂಡಗಳೊಂದಿಗೆ ಉತ್ಸವ ಮೂರ್ತಿಯ ಆಕರ್ಷಕ ಮೆರವಣಿಗೆ ನಡೆಯಲಿದೆ.

ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಪದಾಧಿಕಾರಿಗಳು ಮತ್ತು ದೇವಾಲಯ ಟ್ರಸ್ಸಿನ ಪದಾಧಿಕಾರಿಗಳು ಭಕ್ತರು ಜಾತ್ರೆಯಲ್ಲಿ ಭಾಗವಹಿಸುವರು. ಸಾಮೂಹಿಕ ಅನ್ನದಾನ ನಡೆಯಲಿದೆ. ಪ್ರಧಾನ ಅರ್ಚಕ ಎಲ್‌.ಗೋಪಿ ತಂಡದವರು ವಿಶೇಷ ಪೂಜಾದಿಗಳನ್ನು ನೆರವೇರಿಸಲಿದ್ದಾರೆ ಎಂದು ಕುದೂರು ಈಡಿಗ ಸಂಘದ ಮುಖಂಡ ವೆಂಕಟೇಶ್‌ ಈಡಿಗ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.