ADVERTISEMENT

ಮಾಗಡಿ | ಬೈಕ್‌ಗೆ ಬಸ್ ಡಿಕ್ಕಿ: ವಿದ್ಯಾರ್ಥಿ ಸಾವು

​ಪ್ರಜಾವಾಣಿ ವಾರ್ತೆ
Published 12 ಜುಲೈ 2023, 5:53 IST
Last Updated 12 ಜುಲೈ 2023, 5:53 IST
   

ಮಾಗಡಿ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದ್ದರಿಂದ ವಿದ್ಯಾರ್ಥಿ ದರ್ಶನ್ (19) ಎಂಬಾತ ಮೃತಪಟ್ಟಿರುವ ಘಟನೆ ಮಾಗಡಿ–ರಾಮನಗರ ಮುಖ್ಯರಸ್ತೆಯ ಜೋಡಗಟ್ಟೆ ಕ್ರಾಸ್‌ನಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಹಿಂಬದಿ ಸವಾರ ಶರತ್ ಗಾಯಗೊಂಡಿದ್ದು, ಮಾಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾರೋಹಳ್ಳಿ ತಾಲ್ಲೂಕಿನ ಬಿಲ್ಲನಕೊಪ್ಪೆ ದರ್ಶನ್ ಮತ್ತು ಹಾರೋಹಳ್ಳಿಯ ಮೇಘಲ ಬೀದಿಯ ಶರತ್ ಇಬ್ಬರೂ ಐಟಿಐ ವಿದ್ಯಾರ್ಥಿಗಳಾಗಿದ್ದು, ಬೆಳಿಗ್ಗೆ ಹೋಂಡಾ ಶೈನ್ ಬೈಕ್‌ನಲ್ಲಿ ಕಾಲೇಜಿಗೆ ಹೋಗುತ್ತಿದ್ದರು. ಜೋಡಗಟ್ಟೆ ಕ್ರಾಸ್‌ನಲ್ಲಿ ವೇಗವಾಗಿ ಬಂದ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ದರ್ಶನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.