ADVERTISEMENT

ಅಶ್ವತ್ಥನಾರಾಯಣ ವಿರುದ್ಧ ಬಿಜೆಪಿ ಮಂತ್ರಿಗಳಿಂದಲೇ ಷಡ್ಯಂತ್ರ; ಕುಮಾರಸ್ವಾಮಿ ಆರೋಪ

​ಪ್ರಜಾವಾಣಿ ವಾರ್ತೆ
Published 4 ಮೇ 2022, 9:31 IST
Last Updated 4 ಮೇ 2022, 9:31 IST
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ   

ರಾಮನಗರ: ಅಕ್ರಮ ನೇಮಕಾತಿ ವಿಚಾರದಲ್ಲಿ ಸಚಿವ ಅಶ್ವತ್ಥನಾರಾಯಣ ಅವರ ಹೆಸರನ್ನು ಅವರ ಸಹೋದ್ಯೋಗಿಗಳೇ ಮಾಧ್ಯಮಗಳಿಗೆ ತೇಲಿಬಿಟ್ಟಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ‌. ಕುಮಾರಸ್ವಾಮಿ ಆರೋಪಿಸಿದರು.

ಚನ್ನಪಟ್ಟಣದಲ್ಲಿ ಬುಧವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಅಮಿತ್ ಶಾ ಭೇಟಿ ವೇಳೆ ಅಶ್ವತ್ಥನಾರಾಯಣ ಅವರ ಹೆಸರನ್ನು ಬೇಕಂತಲೇ ಎಳೆ ತಂದು, ಅವರ ತಲೆದಂಡಕ್ಕೆ ಒತ್ತಡ ಹೇರುವುದು ಬಿಜೆಪಿಯ ಕೆಲ‌ ನಾಯಕರ ಉದ್ದೇಶವಾಗಿತ್ತು. ಹೀಗಾಗಿ ಮಾಧ್ಯಮಗಳಿಗೆ ಅವರೇ ಮಾಹಿತಿ ನೀಡಿದ್ದಾರೆ ಎಂದು ದೂರಿದರು.

ಬಿಜೆಪಿ ವಿಚಾರದಲ್ಲಿ ನಾವೇನು ಮಾಡಬೇಕಿಲ್ಲ. ಅವರ ಮನೆಗೆ ಅವರೇ ಬೆಂಕಿ ಇಟ್ಟುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ನವರು ದಾಖಲೆ ಮುಂದಿಡದೇ ಸುಮ್ಮನೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.‌

ADVERTISEMENT

ಇವುಗಳನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.