ಬಿಡದಿ: ಕೋವಿಡ್ ಸಂಕಷ್ಟದ ನಡುವೆ ರಕ್ತಕ್ಕೆ ಬೇಡಿಕೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಬಿಡದಿಯ ಸಿಮ್ರನ್ ಶಾಲಾ ಆವರಣದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ 50ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು.
ಶಿಬಿರದಲ್ಲಿ ಅಂಗವಿಕಲ ವ್ಯಕ್ತಿಯೊಬ್ಬರು ರಕ್ತದಾನ ಮಾಡಿದ್ದು ವಿಶೇಷವಾಗಿತ್ತು. ಒಟ್ಟು 50 ಯೂನಿಟ್ ಸಂಗ್ರಹವಾಗಿದೆ. ಶಿಬಿರದಲ್ಲಿನವೀನ್ ಕುಮಾರ್, ಯೋಗಾನಂದ, ಸತೀಶ್ ಕುಮಾರ್, ನಾಗೇಶ್ ಕುಮಾರ್, ಶಾಲಾ ಮುಖ್ಯಸ್ಥ ಅಜ್ಗರ್ ಉಲ್ಲಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.