ADVERTISEMENT

ಚನ್ನಪಟ್ಟಣ: ಕೊಚ್ಚಿ ಹೋದ ಸೇತುವೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2022, 7:38 IST
Last Updated 7 ಆಗಸ್ಟ್ 2022, 7:38 IST
   

ರಾಮನಗರ: ಕಣ್ವ ನದಿ ನೀರಿನ ರಭಸಕ್ಕೆ ಚನ್ನಪಟ್ಟಣ ತಾಲ್ಲೂಕಿನ ಕೊಂಡಾಪುರ- ಬಾಣಗಹಳ್ಳಿ ಗ್ರಾಮಗಳ ನಡುವಿನ ಸಂಪರ್ಕ ಸೇತುವೆಯು ಭಾನುವಾರ ಕೊಚ್ಚಿ ಹೋಗಿದೆ.

ಕೆಲವು ವರ್ಷದ ಹಿಂದಷ್ಟೇ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ಸದ್ಯ ಕಣ್ವ ಜಲಾಶಯ ಭರ್ತಿ ಆಗಿದ್ದು, ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದ ಹಿನ್ನೆಲೆಯಲ್ಲಿ ಸೇತುವೆಗೆ ಹಾನಿಯಾಗಿದೆ. ಕಳಪೆ ಕಾಮಗಾರಿಯಿಂದ ಸಾರ್ವಜನಿಕರು ಪರದಾಡುವಂತೆ ಆಗಿದ್ದು, ವಿವಿಧ ಗ್ರಾಮಗಳ ನಡುವೆ ಸಂಪರ್ಕ ಕಡಿತಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT