ADVERTISEMENT

ಬಿಎಸ್‌ವೈ, ಈಶ್ವರಪ್ಪ ವಿಶ್ರಾಂತಿ ಪಡೆಯಲಿ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 26 ಜೂನ್ 2023, 19:33 IST
Last Updated 26 ಜೂನ್ 2023, 19:33 IST
ಬಿಎಸ್‌ವೈ, ಈಶ್ವರಪ್ಪ ಮಧ್ಯೆ ಗೊಂದಲ ನಿವಾರಣೆ
ಬಿಎಸ್‌ವೈ, ಈಶ್ವರಪ್ಪ ಮಧ್ಯೆ ಗೊಂದಲ ನಿವಾರಣೆ   

ರಾಮನಗರ: ‘ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ ಮತ್ತು ಕೆ.ಎಸ್.ಈಶ್ವರಪ್ಪ ವಿಶ್ರಾಂತಿ ಪಡೆಯಲಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

‘ಈ ಸರ್ಕಾರ ಹೆಚ್ಚು ದಿನ ಉಳಿಯಲ್ಲ’ ಎಂಬ ಉಭಯ ನಾಯಕರ ಮಾತಿಗೆ ಪ್ರತಿಕ್ರಿಯಿಸಿದ ಅವರು, ‘ಜನರು ನಮಗೆ ಅಧಿಕಾರ ಕೊಟ್ಟಿರುವುದನ್ನು ನೋಡಿ ಅವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ’ ಎಂದು ವ್ಯಂಗ್ಯವಾಡಿದರು.

‘ನಮ್ಮ ಗ್ಯಾರಂಟಿ ಯೋಜನೆಗಳ ಜನಪ್ರಿಯತೆಯನ್ನೂ ಅವರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ. ಅವರಿಗೆ ವಿರೋಧ ಪಕ್ಷದಲ್ಲಿರುವ ಕೆಲಸ ಕೊಟ್ಟಿದ್ದಾರೆ. ಅದನ್ನು ಸರಿಯಾಗಿ ಮಾಡಲಿ’ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.