ADVERTISEMENT

ಅಪಘಾತ: ಆಟೊ ಚಾಲಕನಿಗೆ ತೀವ್ರ ಗಾಯ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2019, 13:21 IST
Last Updated 19 ಅಕ್ಟೋಬರ್ 2019, 13:21 IST
ಅಪಘಾತದಲ್ಲಿ ಜಖಂಗೊಂಡ ಆಟೊ
ಅಪಘಾತದಲ್ಲಿ ಜಖಂಗೊಂಡ ಆಟೊ   

ರಾಮನಗರ: ಇಲ್ಲಿನ ಮಿನಿ ವಿಧಾನಸೌಧ ಮುಂಭಾಗ ಶನಿವಾರ ಮಧ್ಯಾಹ್ನ ಆಟೊ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಆಟೊ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮಿನಿ ವಿಧಾಸೌಧದ ಮುಂಭಾಗ ರಸ್ತೆ ವಿಭಜಕ ದಾಟುತ್ತಿದ್ದ ಆಟೊಗೆ ಮುಂಭಾಗದಿಂದ ಬಸ್ ಡಿಕ್ಕಿಯಾಯಿತು. ಅಪಘಾತದ ರಭಸಕ್ಕೆ ಚಾಲಕನಿಗೆ ತೀವ್ರ ಪೆಟ್ಟಾಗಿದ್ದು, ಆಟೊ ಜಖಂಗೊಂಡಿತು. ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಆತನ ಗುರುತು ತಿಳಿದುಬಂದಿಲ್ಲ. ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಯಿಂದ ಕೆಲ ಹೊತ್ತು ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯವಾಗಿತ್ತು. ಅಪಘಾತದ ನಂತರ ಚಾಲಕ ಬಸ್ ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿ ಆಗಿದ್ದು, ಅಲ್ಲಿದ್ದ ಪ್ರಯಾಣಿಕರನ್ನು ಬೇರೊಂದು ಬಸ್‌ನಲ್ಲಿ ಕಳುಹಿಸಲಾಯಿತು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.