ADVERTISEMENT

ಕರ್ತವ್ಯ ಲೋಪ: ಎಸ್ಐ ಅಮಾನತು

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2019, 15:53 IST
Last Updated 25 ಸೆಪ್ಟೆಂಬರ್ 2019, 15:53 IST

ರಾಮನಗರ: ಕರ್ತವ್ಯ ಲೋಪದ ಆರೋಪದ ಮೇಲೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಮಂಜುನಾಥ್‌ ಸೇವೆಯಿಂದ ಅಮಾನತುಗೊಂಡಿದ್ದಾರೆ.

ಇದೇ ತಿಂಗಳ 21ರಂದು ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಮೂವರು ದುಷ್ಕರ್ಮಿಗಳು ನರೇಂದ್ರ ಎಂಬುವರಿಗೆ ಚಾಕು ತೋರಿಸಿ ಹಣ, ಬೆಲೆ ಬಾಳುವ ವಸ್ತುಗಳನ್ನು ದೋಚಿದ್ದರು. ಈ ಸಂದರ್ಭ ನರೇಂದ್ರ ಠಾಣೆಗೆ ದೂರು ನೀಡಲು ಬಂದಿದ್ದರು. ಆದರೆ ಎಸ್‌ಐ ಮಂಜುನಾಥ್‌ ದೂರು ಸ್ವೀಕರಿಸಿರಲಿಲ್ಲ. ಬದಲಾಗಿ ಎನ್‌ಸಿಆರ್‌ ಮಾಡಿಕೊಂಡಿದ್ದರು.

ಪ್ರಕರಣದ ಎಫ್‌ಐಆರ್‌ ದಾಖಲಿಸಿಕೊಳ್ಳದೇ ನಿರ್ಲಕ್ಷ್ಯ ತೋರಿದ ಕಾರಣಕ್ಕೆ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ರಾಮನಗರ ಎಸ್ಪಿ ಅನೂಪ್‌ ಶೆಟ್ಟಿ ಆದೇಶ ಹೊರಡಿಸಿದ್ದಾರೆ. ಪ್ರಕರಣ ಸಂಬಂಧ ಠಾಣೆಯ ಎಎಸ್‌ಐ ಸೇರಿದಂತೆ ಮೂವರು ಸಿಬ್ಬಂದಿಗೂ ಅವರು ನೋಟಿಸ್‌ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.