ADVERTISEMENT

ಕಬ್ಬಾಳು ಅರಣ್ಯದಲ್ಲಿ ಹುಲಿ ಗಣತಿಗೆ ಅಳವಡಿಸಿದ್ದ ಕ್ಯಾಮೆರಾ ಕಳವು

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2022, 4:31 IST
Last Updated 7 ಏಪ್ರಿಲ್ 2022, 4:31 IST
ಚನ್ನಪಟ್ಟಣ ತಾಲ್ಲೂಕಿನ ಕೆರೆಮೇಗಳದೊಡ್ಡಿ ಗ್ರಾಮದಲ್ಲಿ ನಡೆದ ನಟ ಪುನೀತ್ ರಾಜ್‌ಕುಮಾರ್‌ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಪುನೀತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕೇಕ್ ಕತ್ತರಿಸಿ ಸಂಭ್ರಮಿಸಿದರು
ಚನ್ನಪಟ್ಟಣ ತಾಲ್ಲೂಕಿನ ಕೆರೆಮೇಗಳದೊಡ್ಡಿ ಗ್ರಾಮದಲ್ಲಿ ನಡೆದ ನಟ ಪುನೀತ್ ರಾಜ್‌ಕುಮಾರ್‌ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಪುನೀತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕೇಕ್ ಕತ್ತರಿಸಿ ಸಂಭ್ರಮಿಸಿದರು   

ಕನಕಪುರ: ಅರಣ್ಯದಲ್ಲಿ ಹುಲಿ ಗಣತಿಗೆ ಅಳವಡಿಸಿದ್ದ ಸ್ವಯಂಚಾಲಿತ ಕ್ಯಾಮೆರಾಗಳು ಕಳ್ಳತನವಾಗಿದ್ದು, ಈ ಬಗ್ಗೆ ಸಾತನೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಲ್ಲೂಕಿನ ಸಾತನೂರು ಹೋಬಳಿಯ ಕಬ್ಬಾಳು ಮೀಸಲು ಅರಣ್ಯದ ಕಂಚನಹಳ್ಳಿ ಸಮೀಪದ ಹೊಸಹಳ್ಳ ಕಟ್ಟೆ ಪ್ರದೇಶದಲ್ಲಿ ಕ್ಯಾಮೆರಾ ಟ್ರ್ಯಾಪಿಂಗ್‌ ನಡೆಯುತ್ತಿದೆ.

2021-22ನೇ ಸಾಲಿನ ಹುಲಿ ಗಣತಿಗೆ ಅಳವಡಿಸಿದ್ದ ಎರಡು ಕ್ಯಾಮೆರಾಗಳನ್ನು ಕಿಡಿಗೇಡಿಗಳು ಕಳವು ಮಾಡಿದ್ದಾರೆ.

ADVERTISEMENT

ಈ ಕುರಿತು ಸಾತನೂರು ವಲಯ ಅರಣ್ಯಾಧಿಕಾರಿ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.