ADVERTISEMENT

ದನಗಳ ಪರಿಷೆ ರದ್ದು

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2021, 8:48 IST
Last Updated 17 ಏಪ್ರಿಲ್ 2021, 8:48 IST

ಮಾಗಡಿ: ಕೊರೊನಾ ಸೋಂಕು ಅಧಿಕವಾಗುತ್ತಿರುವುದರಿಂದ ರಂಗನಾಥ ಸ್ವಾಮಿ ದನಗಳ ಪರಿಷೆ ರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌ ತಿಳಿಸಿದರು. ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ನಡೆದ ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಜೀವ ಉಳಿದರೆ, ಜೀವನ ನಡೆಸಬಹುದು. ಮುಂಜಾಗರೂಕತೆಯಿಂದ ಕೋವಿಡ್‌ ಟೆಸ್ಟ್‌ಗಳನ್ನು ಅಧಿಕಗೊಳಿಸಬೇಕು. ದಿನನಿತ್ಯ 400 ಕೋವಿಡ್‌ ಟೆಸ್ಟ್‌ ಮಾಡಲೇ ಬೇಕು. ಹುಲಿಕಟ್ಟೆ ಕೋವಿಡ್‌ ಚಿಕಿತ್ಸಾ ಕೇಂದ್ರಗಳಲ್ಲಿ 20 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್‌ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಅಧಿಕ ದಂಡ ವಸೂಲಿ ಮಾಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT