ಕುದೂರು(ಮಾಗಡಿ): ರಾಷ್ಟ್ರೀಯ ಹೆದ್ದಾರಿ 75 ರ ರಸ್ತೆಪಾಳ್ಯ ಬಳಿ ಮಂಗಳವಾರ ಬೆಳಿಗ್ಗೆ ರಸ್ತೆ ಬದಿ ಮೋರಿಗೆ ಕಾರು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ದೊಡ್ಡಪ್ಪ ಜಗದೀಶ್ ಪ್ರಸಾದ್ ದುಬೇಯ್ (54), ಅವರ ಸ್ನೇಹಿತ ಜೈಶಂಕರ್ ಕಾರವಾರ್ (45) ಹಾಗೂ ಚಾಲಕ ಸುರೇಶ್ (25) ಮೃತರು.
ಕಾರಿನಲ್ಲಿದ್ದ ಲಾನ್ಮನ್ ಯಾದವ್ (40) ಅವರಿಗೆ ಗಂಭೀರ ಗಾಯಗಳಾಗಿವೆ. ಮೃತರು ಇಂಡಿಕಾ ಕಾರಿನಲ್ಲಿ ಧರ್ಮಸ್ಥಳಕ್ಕೆ ಪ್ರವಾಸ ಹೋಗಿ ಹಿಂತಿರುಗಿ ಬೆಂಗಳೂರಿಗೆ ಬರುವಾಗ ಅಪಘಾತ ಸಂಭವಿಸಿದೆ. ಕುದೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮೃತರು ಉತ್ತರ ಪ್ರದೇಶದವರಾಗಿದ್ದು ಬೆಂಗಳೂರಿನ ಆರ್.ಟಿ. ನಗರದಲ್ಲಿ ವಾಸವಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.